ಮೂಡುಬಿದಿರೆ

ಮೂಡುಬಿದಿರೆ ವಕೀಲರ ಸಂಘಕ್ಕೆ ಶರತ್ ಶೆಟ್ಟಿ ಅಧ್ಯಕ್ಷ- ಜಯಪ್ರಕಾಶ್ ಭಂಡಾರಿ ಪ್ರಧಾನ ಕಾರ್ಯದರ್ಶಿ

ಮೂಡುಬಿದಿರೆ: ಇಲ್ಲಿನ ಮೂಡುಬಿದಿರೆ ವಕೀಲರ ಸಂಘ (ರಿ.) ಇದರ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಶರತ್ ಶೆಟ್ಟಿ ಡಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಂಗಳವಾರ ಜರಗಿದ ನೂತನ ಪದಾಧಿಕಾರಿಗಳ ಆಯ್ಕೆಯ ಸಂದರ್ಭದಲ್ಲಿ ಶಾಂತಿ ಪ್ರಸಾದ್ ಹೆಗ್ಡೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಜಯಪ್ರಕಾಶ್ ಭಂಡಾರಿ ಕೆ. ಸತತ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಳಿದಂತೆ ಮರ್ವಿನ್ ಜಾನ್ಸನ್ ಲೋಬೋ ( ಜತೆ ಕಾರ್ಯದರ್ಶಿ) , ಶ್ರೀಮತಿ ಶುಭ ಸಹನ ( ಕೋಶಾಧಿಕಾರಿ), ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶ್ರೀಮತಿ ದೀಕ್ಷಾ, ಕು. ರೂಪಾ , ಶ್ರೀಮತಿ ಸಂಜನಾ ಎಚ್. ಆಯ್ಕೆಯಾಗಿದ್ಧಾರೆ. ಎಲ್ಲ ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ನಡೆದಿದೆ. ಹಿರಿಯ ನ್ಯಾಯವಾದಿ ಎಂ. ಸುಬ್ರಹ್ಮಣ್ಯ ತಂತ್ರಿ ಚುನಾವಣಾ ಅಧಿಕಾರಿಯಾಗಿ ಸಹಕರಿಸಿದರು.

Related posts

ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಸಿಬ್ಬಂದಿ ಭೇಟಿ

Madhyama Bimba

ಮೂಡುಬಿದಿರೆ ಗುಂಡ್ಯಡ್ಕದ ಶ್ರೀ ವಿಠೋಬಾ ರುಕುಮಾಯಿ ದೇವಸ್ಥಾನದಲ್ಲಿ ಭಜನಾ ಮಂಡಳಿಯ ವಜ್ರ ಮಹೋತ್ಸವ ಪ್ರಯುಕ್ತ”ಅಖಂಡ ಭಜನಾ ಸಪ್ತಾಹ ” ಆರಂಭ

Madhyama Bimba

ಜಿ.ಎಲ್. ಆಚಾರ್ಯ ಜುವೆಲರ್ಸ್‌ ಮೂಡುಬಿದಿರೆ- ಎ.12: ನೂತನ ವಿಶಾಲ ಮಳಿಗೆ ಉದ್ಘಾಟನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More