ಕಾರ್ಕಳಹೆಬ್ರಿ

ಶಿವಪುರ ಶ್ರೀಶಂಕರ ದೇವ ದೇವಸ್ಥಾನ ಬ್ರಹ್ಮ ಕಲಶಾಭಿಷೇಕ : ಶ್ರೀ ಗಣಪತಿ ಮತ್ತು ಶ್ರೀ ಅನ್ನಪೂರ್ಣೇಶ್ವರಿ ದೇವರ ಪ್ರತಿಷ್ಠೆ, ಧ್ವಜಸ್ತಂಭ ಪ್ರತಿಷ್ಠೆ

ಹೆಬ್ರಿ : ಇತಿಹಾಸ ಪ್ರಸಿದ್ಧ ಶಿವಪುರ ಶ್ರೀಶಂಕರದೇವ ದೇವಸ್ಥಾನದಲ್ಲಿ ಮೇ 6 ರ ತನಕ ನಡೆಯುವ ಬ್ರಹ್ಮ ಕಲಶಾಭಿಷೇಕದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಗಳು ಹಾಗೂ ಶ್ರೀ ಗಣಪತಿ ಮತ್ತು ಶ್ರೀ ಅನ್ನಪೂರ್ಣೇಶ್ವರಿ ದೇವರ ಪ್ರತಿಷ್ಠೆ, ಧ್ವಜಸ್ತಂಭ ಪ್ರತಿಷ್ಠೆ, ಚಂಡಿಕಾ ಹೋಮ ಕ್ಷೇತ್ರದ ತಂತ್ರಿವರೇಣ್ಯರಾದ ಹೆರ್ಗ ರಾಘವೇಂದ್ರ ತಂತ್ರಿಯವರ ನೇತ್ರತ್ವದಲ್ಲಿ ಬುಧವಾರ ನಡೆಯಿತು.

ಶ್ರೀ ನಾಗದೇವರ ಸನ್ನಿಧಿಯಲ್ಲಿ ವಾಸ್ತು ವಿಧಾನ, ನಾಗ ದೇವರ ಬಿಂಬಧಿವಾಸ, ಶ್ರೀ ಗಣಪತಿ ಮತ್ತು ಶ್ರೀ ಅನ್ನಪೂರ್ಣೇಶ್ವರಿ ದೇವರಿಗೆ ಕಲಶಾಧಿವಾಸ ನಡೆಯಿತು.

ಶಿವಪುರ ಶ್ರೀ ಶಂಕರದೇವ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಾಸುದೇವಾ ಭಟ್, ಪ್ರಧಾನ ಕಾರ್ಯದರ್ಶಿ ಮೂರ್ಸಾಲು ಗೋಕುಲದಾಸ ನಾಯಕ್, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾರ್ಮಕ್ಕಿ ವಿಶ್ವನಾಥ ನಾಯಕ್, ಮಾಜಿ ಅಧ್ಯಕ್ಷ ಮೂರ್ಸಾಲು ಮೋಹನದಾಸ ನಾಯಕ್, ಉದ್ಯಮಿ ಉದಯ ಕಡಂಬ ಶಿವಮೊಗ್ಗ, ಕಾಮಗಾರಿ ಸಮಿತಿಯ ಸಂಚಾಲಕ ಶ್ರೀನಿವಾಸ ಹೆಬ್ಬಾರ್ ಶಿವಪುರ, ಆರ್ಥಿಕ ಸಮಿತಿ ಸಂಚಾಲಕ ಸುರೇಶ ಶೆಟ್ಟಿ ಹುಣ್ಸೆಯಡಿ ಶಿವಪುರ, ಉಗ್ರಾಣ ಸಮಿತಿಯ ಸಂಚಾಲಕ ಬೈಕಾಡಿ ಮಂಜುನಾಥ ರಾವ್ ಎಲಿಕೋಡು, ಮಹಾಬಲೇಶ್ವರ ಅಡಿಗ ಶಿವಪುರ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸಂತೋಷ ಕುಮಾರ್ ಶೆಟ್ಟಿ ನಾಯರಕೋಡು, ಸುನಂದಾ ಕುಲಾಲ್, ಪೂರ್ಣೇಶ ಸೇರಿಗಾರ್, ಸದಾನಂದ ಪೂಜಾರಿ, ವಿಶಾಲಾಕ್ಷಿ ವಿ ಶೆಟ್ಟಿ, ಸಂಜಯ ಆಚಾರ್ಯ, ಸಚಿನ್ ನಾಯ್ಕ್, ಜೀರ್ಣೋದ್ಧಾರ ಸಮಿತಿಯ ಪ್ರಸನ್ನ ಶೆಟ್ಟಿ, ರಮೇಶ ಕುಮಾರ್, ರಾಘವೇಂದ್ರ ಪೂಜಾರಿ, ಜಗನ್ನಾಥ ಹಾಂಡ, ಪುಪ್ಪಾ ನಾಯ್ಕ್, ಪೂರ್ಣೀಮಾ ಹಾಂಡ, ವಿವಿಧ ಪ್ರಮುಖರಾದ ಚಂದ್ರಶೇಖರ ಶೆಟ್ಟಿ ಬಿಲ್ಲುಬೈಲು, ಜಗನ್ನಾಥ ಕುಲಾಲ್ ಶಿವಪುರ, ಶಿವಪ್ರಸಾದ್ ಅಡಿಗ, ರಾಧಿಕಾ ಅಡಿಗ, ಜಯಶೀಲ ಹೆಗ್ಡೆ, ರಂಜಿತಾ ಪ್ರಭು, ರಾಮ ಬೆಳಿರಾಯ, ಜೀರ್ಣೋದ್ಧಾರ ಸಮಿತಿ, ವ್ಯವಸ್ಥಾಪನಾ ಸಮಿತಿ, ವಿವಿಧ ಉಪಸಮಿತಿಯ ಪ್ರಮುಖರು, ಸದಸ್ಯರು,ಗಣ್ಯರು, ಅರ್ಚಕ ವೃಂದ ಸೇರಿದಂತೆ ಭಕ್ತಸಮೂಹ ಭಾಗಿಯಾದರು.

Related posts

ಕ್ರೈಸ್ಟ್‌ಕಿಂಗ್: ದ್ವಿತೀಯ ಪಿಯುಸಿ ಮರುಮೌಲ್ಯಮಾಪನ- ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ ಪಡೆದ ಪ್ರಜ್ವಲ್ ಶೆಟ್ಟಿ- ಉಡುಪಿ ಜಿಲ್ಲೆಗೆ ದ್ವಿತೀಯ ರ್‍ಯಾಂಕ್

Madhyama Bimba

ಶ್ರೀ ಮಹಾವೀರ ಕಾಲೇಜು, ಮೂಡುಬಿದಿರೆಗೆ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕ ಅಧ್ಯಕ್ಷರ ಭೇಟಿ

Madhyama Bimba

ಪಡುಕುಡೂರು: ಶ್ರೀ ಮಮ್ಮಾಯಿ ಮಹಿಳಾ ಭಜನಾ ಮಂಡಳಿ ಮತ್ತು ಮಮ್ಮಾಯಿ ಮಹಿಳಾ ಚೆಂಡೆ ಬಳಗ ಲೋಕಾರ್ಪಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More