ಅಜೆಕಾರು: ಕುಕ್ಕುಜೆ ಗ್ರಾಮದ ದೊಂಡೆರಂಗಡಿ ಪೇಟೆ ಬಳಿ ಮಟ್ಕಾ ಆಟದಲ್ಲಿ ನಿರತನ ಮೇಲೆ ಪ್ರಕರಣ ದಾಖಲಾದ ಘಟನೆ ಏ. 30ರಂದು ವರದಿಯಾಗಿದೆ.
ಅಶ್ವಿನ್ ಎಂಬಾತನು ಸಾರ್ವಜನಿಕ ಸ್ಥಳದಲ್ಲಿ ಚೀಟಿಯಲ್ಲಿ ನಂಬ್ರ ಬರೆದು ಕೊಟ್ಟು ಅವರಿಂದ ಹಣವನ್ನು ಸಂಗ್ರಹಿಸುತ್ತಿದ್ದನು. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಮಹೇಶ್ ಟಿ.ಎಮ್ ದಾಳಿ ನಡೆಸಿ ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಜನರಿಂದ ಹಣವನ್ನು ಸಂಗ್ರಹಿಸಿ ಸಂತೋಷ ಪೂಜಾರಿ ಎಂಬವರಿಗೆ ನೀಡುತ್ತಿದ್ದು ಅವರು ತನಗೆ 100 ರೂಪಾಯಿಗೆ 20 ರೂಪಾಯಿಯಂತೆ ಕಮಿಷನ್ ನೀಡುತ್ತಿರುವುದರ ಬಗ್ಗೆ ಮಾಹಿತಿ ನೀಡಿದ್ದಾನೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಆತನಿಂದ ಮಟ್ಕಾ ಆಟಕ್ಕೆ ಬಳಸಿದ್ದ ಪರಿಕರಗಳನ್ನು ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
