ಅಜೆಕಾರು: ವ್ಯಕ್ತಿಯೋರ್ವರು ಅನಾರೋಗ್ಯದ ವಿಷಯವಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಏ. 30ರಂದು ವರದಿಯಾಗಿದೆ.
ಪಡುಕುಡೂರು ಎಳ್ಳಾರೆ ಕೃಷ್ಣ ಬಿ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡವರು.
ಇವರು ಸುಮಾರು 15 ವರ್ಷದಿಂದ ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದರೂ ಗುಣಮುಖವಾಗದೇ ಇದ್ದುದರಿಂದ ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುತ್ತದೆ.
