ಕಾರ್ಕಳ: ಹಿರ್ಗಾನ ಗ್ರಾಮದ ಮೀನು ಮಾರ್ಕೆಟ್ ಬಳಿ ಮೋಟಾರ್ ಸೈಕಲ್ಗೆ ಸ್ಕೂಟರ್ ಡಿಕ್ಕಿಯಾದ ಘಟನೆ ಮೇ. 01ರಂದು ನಡೆದಿದೆ.
ಶಶಿಕಾಂತ ಹಾಗೂ ಸುಮಿತ್ರರವರು ಮೋಟಾರ್ ಸೈಕಲ್ನಲ್ಲಿ ಹಿರ್ಗಾನದಿಂದ ಕಾರ್ಕಳ ಕಡೆಗೆ ಹೋಗುತ್ತಿರುವಾಗ ಕಾರ್ಕಳದಿಂದ ಹಿರ್ಗಾನ ಕಡೆಗೆ ಬರುತ್ತಿದ್ದ ಸ್ಕೂಟರ್ ಸವಾರ ಯಾವುದೇ ಸೂಚನೆಯನ್ನು ನೀಡದೆ ಒಮ್ಮೇಲೆ ಬಲಕ್ಕೆ ಚಲಾಯಿಸಿ ಮೋಟಾರ್ ಸೈಕಲ್ಗೆ ಡಿಕ್ಕಿ ಹೊಡೆದಿದ್ದಾನೆ.
ಡಿಕ್ಕಿ ಹೊಡೆದ ಪರಿಣಾಮ ಮೋಟಾರ್ ಸೈಕಲ್ ಸವಾರರು ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದು ಸುಮಿತ್ರರವರಿಗೆ ಮುಖ, ತಲೆಗೆ ರಕ್ತ ಗಾಯವಾಗಿ ಮಂಗಳೂರು ಮುಕ್ಕದ ಶ್ರೀನಿವಾಸ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುತ್ತಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
