ಚಿತ್ತೇರಿ ಶ್ರೀ ದುರ್ಗಾಪರಮೇಶ್ವರೀ ಸಪರಿವಾರ ದೇವಸ್ಥಾನ ಕೆರ್ಜಾಡಿ ಜಗಲ್ಗುಡ್ಡೆ ಇಲ್ಲಿಯ
ವರ್ಷಾವಧಿ ಜಾತ್ರಾ ಮಹೋತ್ಸವ ಕೆರ್ಜಾಡಿ ಹಬ್ಬ ಮೇ. 08 ಶುಕ್ರವಾರದಂದು ಜರಗಲಿದೆ.
ಅಂದು ಬೆಳಿಗ್ಗೆ 8.30ರಿಂದ ಪ್ರಾರ್ಥನೆ, ಗುರುಗಣಪತಿ ಪೂಜೆ, ಪುಣ್ಯಾಹವಾಚನ, ನವಕ ಪ್ರಧಾನ ಹೋಮ, ಚಂಡಿಕಾಹೋಮ, ಗಂಟೆ ೧೧.೩೦ಕ್ಕೆ : ಪಂಚಾಮೃತ ಸಹಿತ ಕಲಶಾಭಿಷೇಕ, ಮಹಾಪೂಜೆ, ಮಧ್ಯಾಹ್ನ 12.00 ಗಂಟೆಗೆ ಚಂಡಿಕಾ ಹೋಮದ ಪೂರ್ಣಾಹುತಿ, ತೀರ್ಥಪ್ರಸಾದ, ಮಧ್ಯಾಹ್ನ ಅನ್ನಪ್ರಸಾದ, ಮಧ್ಯಾಹ್ನ 12.30ಕ್ಕೆ 54 ವರ್ಷಗಳಿಂದ ಸುಧೀರ್ಘವಾಗಿ ಸೇವೆ ಸಲ್ಲಿಸುತ್ತಿರುವ ಜನಪ್ರಿಯ ವೈದ್ಯರಾದ ಡಾ. ಎಸ್. ಪರಮೇಶ್ವರ್ ಉಡುಪ ಅವರಿಗೆ ಶ್ರೀ ಕ್ಷೇತ್ರದ ತಂತ್ರಿವೇರಣ್ಯನಾದ ವೇದಮೂರ್ತಿ ಗಿರೀಶ್ ಸೋಮಯಾಜಿ ಪಡುವಳ್ಳಿ ಇವರಿಂದ ಶ್ರೀ ದುರ್ಗಾ ಅನುಗ್ರಹ ಸನ್ಯಾನ ಪತ್ರದೊಂದಿಗೆ ಗೌರವಾರ್ಪಣೆ ನಡೆಯಲಿದೆ.
ಸಂಜೆ 6.00ರಿಂದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಚಿತ್ತೇರಿ ಆರ್ಡಿ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ (ರಿ.), ಕೊಂಜಾಡಿ ಹಾಗೂ ಶ್ರೀ ದುರ್ಗಾಂಬಾ ಭಜನಾ ಮಂಡಳಿ, ಅರಸಮ್ಮಕಾನು ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ 9.30ಕ್ಕೆ ರಂಗಪೂಜೆ, ಸಂದರ್ಶನ ಸುತ್ತು ಬಲಿ, ಪ್ರಸಾದ ವಿತರಣೆ, ಅನ್ನಪ್ರಸಾದ, ರಾತ್ರಿ 11.00ರಿಂದ ಕಲ್ಲುಕುಟಿಗ ಮತ್ತು ಸತ್ಯದೇವತೆಗೆ ಸಿರಿ ಸಿಂಗಾರ ಕೋಲ ಸೇವೆ ಜರಗಲಿದೆ.
