ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ವತಿಯಿಂದ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಕೆ. ಜೈರಾಜ್ ಬಿ. ರೈಯವರು ತಿಳಿಸಿದ್ದಾರೆ.
ಸಂಘದ ಸದಸ್ಯರ ಮಕ್ಕಳಿಗೆ 2025 -26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 95 ಹಾಗೂ ಅದಕ್ಕಿಂತ ಹೆಚ್ಚು ಅಂಕ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ. 90 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ
ಮತ್ತು
2025-26ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿಪಿ.ಯು.ಸಿ ಉತ್ತೀರ್ಣರಾಗಿ, 2026-27ನೇ ಶೈಕ್ಷಣಿಕ ಸಾಲಿನಲ್ಲಿ
1. ಎಂ.ಬಿ.ಬಿ.ಎಸ್/ಬಿಡಿಎಸ್/ಆಯುಷ್/ವೆಟರ್ನರಿ ಮುಂತಾದ ವೈದ್ಯಕೀಯ ಶಿಕ್ಷಣ ಪದವಿ/ಸ್ನಾತಕ್ಕೋತ್ತರ ವ್ಯಾಸಂಗವನ್ನು ರಾಷ್ಟ್ರೀಯ ನೀಟ್ ಪರೀಕ್ಷೆ ಮುಖೇನ ಸರ್ಕಾರಿ ಕಾಲೇಜಿನಲ್ಲಿ ಮೆರಿಟ್ ಸೀಟ್ನಲ್ಲಿ ಅಡ್ಮಿಷನ್ ಪಡೆದ ವಿದ್ಯಾರ್ಥಿಗಳಿಗೆ,
2. ಇಂಜಿನಿಯರಿಂಗ್ ಪದವಿ/ಸ್ನಾತಕ್ಕೋತ್ತರ ವ್ಯಾಸಂಗವನ್ನು ರಾಜ್ಯ ಮತ್ತು ರಾಷ್ಟ್ರೀಯ ಪ್ರವೇಶ ಪರೀಕ್ಷೆ (ಸಿಇಟಿ/ಜೆಇಇ) ಪರೀಕ್ಷೆ ಮುಖೇನ ಸರ್ಕಾರಿ ಕಾಲೇಜಿನಲ್ಲಿ ಮೆರಿಟ್ ಸೀಟ್ನಲ್ಲಿ ಅಡ್ಮಿಷನ್ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಡಿಪ್ಲೊಮಾ ನಂತರ ಇಂಜಿನಿಯರಿಂಗ್ ಪದವಿಯ ವ್ಯಾಸಂಗವನ್ನು ರಾಜ್ಯ (ಸಿಇಟಿ) ಪರೀಕ್ಷೆ ಮುಖೇನ ಸರ್ಕಾರಿ ಕಾಲೇಜಿನಲ್ಲಿ ಮೆರಿಟ್ ಸೀಟ್ನಲ್ಲಿ ಅಡ್ಮಿಷನ್ ಪಡೆದ ವಿದ್ಯಾರ್ಥಿಗಳಿಗೆ,
3. ಅಗ್ರಿಕಲ್ಚರಲ್/ಫಿಶರೀಶ್ ಮತ್ತು ವೆಟರ್ನರಿ ಪದವಿ/ಸ್ನಾತಕ್ಕೋತ್ತರ ಪದವಿ ರಾಜ್ಯ ಸಿಇಟಿ ಪರೀಕ್ಷೆ ಮುಖೇನ ಸರ್ಕಾರಿ ಕಾಲೇಜಿನಲ್ಲಿ ಮೆರಿಟ್ ಸೀಟ್ನಲ್ಲಿ ಅಡ್ಮಿಷನ್ ಪಡೆದ ವಿದ್ಯಾರ್ಥಿಗಳಿಗೆ,
4. ಕಾನೂನು ಪದವಿ / ಸ್ನಾತಕೋತ್ತರ ವ್ಯಾಸಂಗವನ್ನು ಸಿಎಲ್ಇಟಿ ಪರೀಕ್ಷೆ ಮುಖೇನ ನ್ಯಾಷನಲ್ ಲಾ ಕಾಲೇಜಿನಲ್ಲಿ ಮೆರಿಟ್ ಸೀಟ್ನಲ್ಲಿ ಅಡ್ಮಿಷನ್ ಪಡೆದ ವಿದ್ಯಾರ್ಥಿಗಳಿಗೆ,
5. ಎಂ.ಎ/ಎಂ.ಕಾಂ./ಎಂ.ಬಿ.ಎ/ಎಂ.ಎಸ್.ಎಸ್ಸಿ/ಎಂ.ಇಡಿ ಪದವಿಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ,
5. ಪಾಲಿಟೆಕ್ನಿಕ್ ಡಿಪ್ಲೊಮಾ /ಐ.ಟಿ.ಐ/ಬಿ.ಪಿ.ಇ.ಡಿ/ಬಿ.ಇ.ಡಿ./ಡಿ.ಇ.ಡಿ ಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ,
7. ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕೋರ್ಸ್ಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿಭಾ ಪುರಸ್ಕಾರದ ಅರ್ಜಿಗಳು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ಎಲ್ಲಾ ಶಾಖೆಗಳಲ್ಲಿ ಮತ್ತು ಸಂಘದ ಅಧಿಕೃತ ವೆಬ್ಸೈಟ್ http://ramakrishnacredit.com/ ನಲ್ಲಿ ಲಭ್ಯವಿದ್ದು ಜೂನ್ 15, 2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಸದಸ್ಯರು ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
