ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಮೂಡುಬಿದರೆ ತಾಲೂಕು ಘಟಕದ ವತಿಯಿಂದ ಎಸ್ ಎಸ್ ಎಲ್ ಸಿ ಯಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುವ ಕುಮಾರಿ ಶಾದ್ವಿ ಅವರನ್ನು ಅಭಿನಂದಿಸಲಾಯಿತು.
ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾಗಿರುವ ಇವರು 622 ಅಂಕ ಗಳಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷರಾಗಿರುವ ಶ್ರೀಮತಿ ನಾಗರತ್ನ ಶಿರೂರು ಸಂಘದ ಉಪಾಧ್ಯಕ್ಷ ರಾಗಿರುವ ಸುಧಾಕರ್ ಸಾಲಿಯಾನ್ ಕಾರ್ಯದರ್ಶಿಯಾಗಿರುವ ಶ್ರೀಮತಿ ಮಹೇಶ್ವರಿ . ಸಂಘದ ಪದಾಧಿಕಾರಿಗಳಾಗಿರುವ ಶ್ರೀಮತಿ ರೇಣುಕಾ, ಶ್ರೀಮತಿ ಗೀತಾ, ಪ್ರಶಾಂತ್ ಉಪಸ್ಥಿತರಿದ್ದರು.
