ಕಾರ್ಕಳಹೆಬ್ರಿ

ಕನಕ ಕವನ ಸ್ಪರ್ಧೆ: ಅರ್ಜಿ ಆಹ್ವಾನ

ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ರಾಜ್ಯ ಮಟ್ಟದ ಕನಕ ಕವನ ಸ್ಪರ್ಧೆ ಏರ್ಪಡಿಸಲು ಉದ್ದೇಶಿಸಿದ್ದು, 18 ರಿಂದ 30 ವರ್ಷದೊಳಗಿನವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.

ಭಾಗವಹಿಸುವ ಸ್ಪರ್ಧಿಗಳು ಸ್ವ-ರಚಿತ ಕವನವನ್ನು ಸಲ್ಲಿಸಲು ಜೂನ್ 22 ಕೊನೆಯ ದಿನ. ಅರ್ಜಿ ಮತ್ತು ಕವನವನ್ನು ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056ಇಲ್ಲಿಗೆ ಅಂಚೆ, ಕೊರಿಯರ್, ಇ-ಮೇಲ್ ಅಥವಾ ಖುದ್ದಾಗಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://kanakadasaresearchcenter. karnataka.gov.in/ ಅಥವಾ ಮೊ.ನಂ: 9743545865ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸದಸ್ಯ ಕಾರ್ಯ ದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ನಿಟ್ಟೆಯಲ್ಲಿ ಕ್ರಿಸ್ಮಸ್ ಆಚರಣೆ

Madhyama Bimba

ಕಾರ್ಕಳ: ಯುವಕ ನೇಣು ಬಿಗಿದು ಆತ್ಮಹತ್ಯೆ

Madhyama Bimba

ಅಜೆಕಾರು ಜ್ಯೋತಿ ಮಹಿಳಾ ಮಂಡಳಿ ವತಿಯಿಂದ ಮಹಿಳಾ ದಿನಾಚರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More