ಮೂಡುಬಿದಿರೆ

ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಸಿಬ್ಬಂದಿ ಭೇಟಿ

ಶಿರ್ತಾಡಿ: ಶಿರ್ತಾಡಿಯ ಮೈತ್ರಿ ಸೌಧದಲ್ಲಿ ಪ್ರಧಾನ ಕಚೇರಿ ಹೊಂದಿರುವ ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಶನಿವಾರ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.


ಸೌಹಾರ್ದ ಸಹಕಾರಿಗಳ ಮಾತೃಸಂಸ್ಥೆಯಾಗಿರುವ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯು ಸೌಹಾರ್ದ ಸಹಕಾರಿ ಕ್ಷೇತ್ರದ ಅಭಿವೃದ್ಧಿ ನಿಟ್ಟಿನಲ್ಲಿ ಶಾಸನಾತ್ಮಕ, ಶಿಕ್ಷಣ, ತರಬೇತಿ ಮತ್ತು ಪ್ರಚಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದೆ. ಇದರ ಭಾಗವಾಗಿ ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಭೇಟಿ ನೀಡಲಾಗಿದೆ.

ಭೇಟಿಯ ಸಂದರ್ಭದಲ್ಲಿ ಸಂಯುಕ್ತ ಸಹಕಾರಿಯ ಉಪ ಪ್ರಧಾನ ವ್ಯವಸ್ಥಾಪಕರಾದ ನಾರಾಯಣ ಹೆಗ್ಡೆ, ತರಬೇತಿ ಅಧಿಕಾರಿ ವಿ.ಜೆ ಕಾರಕೋನ್, ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ, ಸಹಾಯಕ ಪ್ರಧಾನ ವ್ಯವಸ್ಥಾಪಕ ರಾಜಶೇಖರ ಹೂಗಾರ್, ಸಹಾಯಕ ಪ್ರಧಾನ ವ್ಯವಸ್ಥಾಪಕ ಶ್ರೀಧರ್, ಸಹಕಾರ ಇಲಾಖೆಯ ನಿವೃತ್ತ ಅಪರ ನಿಬಂಧಕ ನಾಗರಾಜಯ್ಯ ಭಾಗವಹಿಸಿದ್ದರು.

ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ವಿ ಶೆಟ್ಟಿ, ಉಪಾಧ್ಯಕ್ಷ ವಿನಯ ಹೆಗ್ಡೆ, ನಿರ್ದೇಶಕರಾದ ಮಹಾವೀರ ಕೆ ಜೈನ, ಎಸ್. ಪ್ರವೀಣ್ ಕುಮಾರ್, ಲ್ಯಾನ್ಸಿ ಡೇಸಾ, ರಕ್ಷಿತ್ ಆರ್, ಸದಾನಂದ ಪೂಜಾರಿ, ರವೀಂದ್ರ ಬಂಗೇರ, ಶಾರದಾ ಸುವರ್ಣ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂದೀಪ್ ಜೆ ಕೆ ಹಾಗೂ ಎಲ್ಲಾ ಶಾಖೆಯ ಶಾಖಾ ವ್ಯವಸ್ಥಾಪಕರು, ಸಿಬ್ಬಂದಿಗಳು, ಸ್ವಸಹಾಯ ಸಂಘದ ಸೇವಾ ನಿರತರು, ಪಿಗ್ಮಿ ಸಂಗ್ರಾಹಕರು ಹಾಜರಿದ್ದರು.

Related posts

ಜಿ ಎಲ್ ಆಚಾರ್ಯ ಜ್ಯವೆಲ್ಲರ್ಸ್ ವಿಸಿಟ್ & ವಿನ್ ಸ್ಪರ್ಧೆಯ ಫಲಿತಾಂಶ ಮತ್ತು ಸನ್ಮಾನ ಕಾರ್ಯಕ್ರಮ

Madhyama Bimba

ಮೂಡುಬಿದಿರೆ, ಗೌರಿಕೆರೆ ಬಳಿಯ ಶ್ರೀ ರಾಮಪುರದ ಸಪರಿವಾರ ಶ್ರೀ ರಾಮ ದೇವರ ಬಿಂಬ ಪುನರ್ ಪ್ರತಿಷ್ಠೆ ಹಾಗೂ ಅಷ್ಠಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Madhyama Bimba

ವರ್ಕು ಶಂಕರ ರಾವ್ ನಿಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More