ಮೂಡುಬಿದಿರೆ

ಬೆಳುವಾಯಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಅಫಘಾತ

ಕಾರ್ಕಳ – ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳುವಾಯಿಯ ಕಾಂತಾವರ ಕ್ರಾಸ್ ಬಳಿ ಬಸ್ ಹಾಗೂ ಕಾರು ನಡುವೆ ಇಂದು ಅಫಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವು ತಿಂಗಳಿನಿಂದ ನಡೆಯುತ್ತಿರುವ ಅಫಘಾತಗಳಲ್ಲಿ ಈ ಪ್ರಕರಣವು ಸೇರಿದಂತಾಗಿದೆ.

ಕಾಂತಾವರ ಕ್ರಾಸ್ ನಲ್ಲಿ ಬುಧವಾರದಿಂದ ಬಂದ್ ಮಾಡಲಾದ ನಂತರ ರಸ್ತೆಯ ಅವ್ಯವಸ್ಥಿತ ಚಾಲನೆಯಿಂದಾಗಿ ಅಫಘಾತ ಹೆಚ್ಚಾಗುವ ಮುನ್ಸೂಚನೆ ಕಂಡು ಬಂದಿದೆ. ಕಾಂತಾವರ ಕಡೆಯಿಂದ ಬರುವ ವಾಹನಗಳು ಮೂಡುಬಿದಿರೆ ಕಡೆಗೆ ಸಾಗಬೇಕಾದರೆ ಕಾರ್ಕಳ ಕಡೆ ತಿರುಗಿ ಚಿಲಿಂಬಿ ಬಳಿ ಯು ಟರ್ನ್ ಪಡೆದು ಬೆಳುವಾಯಿ ಬಂದು ಮುಂದೆ ಸಾಗಬೇಕಾಗಿದೆ.

ರಸ್ತೆ ವೇಗದ ಚಾಲನೆಗೆ ಸಿದ್ಧಗೊಂಡ ನಂತರ ಅಫಘಾತಕ್ಕೆ ಮತ್ತೆ ಹೊಸ ಕಾರಣಗಳು ಗೋಚರಿಸುತ್ತಿವೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನ ನಿತ್ಯ ನಿಯಮಾವಳಿಗಳಲ್ಲಿ ಬದಲಾವಣೆ ಮಾಡುತ್ತಿರುವುದರಿಂದ, ಸಂಚಾರಕ್ಕೆ ಹೊಸ ದಾರಿ ನೀಡುತ್ತಿರುವುದರಿಂದ ವಾಹನ ಸವಾರರು ದಿಕ್ಕು ತೋಚದಂತಾಗಿದ್ದಾರೆ.

Related posts

ಮೂಡುಬಿದಿರೆ ಗುಂಡ್ಯಡ್ಕದ ಶ್ರೀ ವಿಠೋಬಾ ರುಕುಮಾಯಿ ದೇವಸ್ಥಾನದಲ್ಲಿ ಭಜನಾ ಮಂಡಳಿಯ ವಜ್ರ ಮಹೋತ್ಸವ ಪ್ರಯುಕ್ತ”ಅಖಂಡ ಭಜನಾ ಸಪ್ತಾಹ ” ಆರಂಭ

Madhyama Bimba

 ಉಮೇಶ್ ಭಟ್ ಅವರಿಗೆ ಸಂಸ್ಕೃತದಲ್ಲಿ ಪ್ರಥಮ ರ್‍ಯಾಂಕ್

Madhyama Bimba

ಎಕ್ಸಲೆಂಟ್ ನ ನಕ್ಷತ್ರ ವಿ. ರಾಜ್ಯಕ್ಕೆ 6ನೇ ರ್‍ಯಾಂಕ್ 

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More