ಕಾರ್ಕಳ: ಮುಂಡ್ಕೂರು ಜಾರಿಗೆಕಟ್ಟೆಯ ಬಳಿ ಕಾರಿಗೆ ಅಟೋರಿಕ್ಷಾ ಡಿಕ್ಕಿಯಾಗಿ ರಿಕ್ಷಾದಲ್ಲಿದ್ದ ಪ್ರಯಾಣಿಕ ಗಂಭೀರ ಗಾಯಗೊಂಡು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಮೇ. 29ರಂದು ನಡೆದಿದೆ.
ಅಟೋ ರಿಕ್ಷಾ ಚಾಲಕ ಮಹಮ್ಮದ್ ಕೈಫ್ರವರು ಸಚ್ಚೇರಿಪೇಟೆಯಿಂದ ಜಾರಿಗೆಕಟ್ಟೆ ಕಡೆಗೆ ಪ್ರಯಾಣಿಕ ಶ್ರೀಕಾಂತ್ರನ್ನು ಕುಳ್ಳಿರಿಸಿಕೊಂಡು ಅತೀವೇಗದಿಂದ ಚಲಾಯಿಸಿಕೊಂಡು ಬಂದು ಮುಂಡ್ಕೂರಿನಿಂದ ಸಚ್ಚೇರಿಪೇಟೆ ಕಡೆಗೆ ಹೋಗುತ್ತಿದ್ದ ಅನಂತ ಪದ್ಮನಾಭ ಆಚಾರ್ಯರವರ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ.
ಡಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾ ಮಗುಚಿ ಬಿದ್ದು, ಅಟೋ ಚಾಲಕ ಗಾಯಗೊಂಡು, ರಿಕ್ಷಾದಲ್ಲಿದ್ದ ಶ್ರೀಕಾಂತ್ ಗಂಭೀರ ಗಾಯಗೊಂಡು ಚಿಕಿತ್ಸೆಗಾಗಿ ಕಿನ್ನಿಗೋಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುತ್ತಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
