
ಮೂಡುಬಿದಿರೆಯಲ್ಲಿ ನಾಲ್ಕು ಮಹಡಿಯ ಕಟ್ಟಡವೊಂದರಲ್ಲಿ ಶೀಟು ಹಾಕುವ ಕೆಲಸ ಮಾಡುತ್ತಿದ್ದ ಬಾಲಕ ಕೆಳಕ್ಕೆ ಬಿದ್ದು ದಾರುಣ ಅಂತ್ಯ ಕಂಡಿದ್ದಾನೆ.

ಮೂಡುಬಿದಿರೆ ಮಾರ್ಪಾಡಿ ಗ್ರಾಮದ ಪಾದೆಮನೆ ನಿವಾಸಿ ಸಂತೋಷ್ ಅವರ ಪುತ್ರ ಶೌರ್ಯ ಎಸ್.ಆಚಾರ್ಯ ( 17)
ಕಡಪಳ್ಳ ಗಾಂಧಿನಗರದಲ್ಲಿರುವ ರಾಯಲ್ ಪ್ಯಾರಡೈಸ್ ಎಂಬ ಕಟ್ಟಡದಲ್ಲಿ ನಾಲ್ಕನೇ ಮಹಡಿಯ ಮೇಲೆ ಶೀಟ್ ಹಾಕುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಕಟ್ಟಡದಿಂದ ಕೆಳಕ್ಕೆ ಬಿದ್ದ ಶೌರ್ಯನನ್ನು ಸ್ಥಳೀಯ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಕಟ್ಟಡದ ಗುತ್ತಿಗೆದಾರ ಪ್ರವೀಣ್ ಹಾಗೂ ಮಾಲಕರಾದ ನೋರ್ಟ್ ಶಾಬಾ ರೇಗೋ ಅವರು ಕೆಲಸ ಮಾಡುವಾಗ ಸರಿಯಾದ ಸುರಕ್ಷತಾ ಸಾಮಾಗ್ರಿಗಳನ್ನು ನೀಡದಿರುವುದೇ ಈ ದುರಂತಕ್ಕೆ ಕಾರಣವೆನ್ನಲಾಗಿದೆ.ಈ ಬಗ್ಗೆ ಮೂಡುಬಿದಿರೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
