ಮೂಡುಬಿದಿರೆ

ಕೇಮಾರು, ಕೊಲ್ಲೂರು ಶಾಖಾ ಮಠಕ್ಕೆ ಸಹಕಾರ: ಸಂಸದ ಬ್ರಿಜೇಶ್ ವಾಗ್ದಾನ

ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಮೂಡುಬಿದಿರೆ ತಾಲೂಕಿನ ಕೇಮಾರು ಸಾಂದೀಪನಿ ಸಾಧನಾಶ್ರಮಕ್ಕೆ ಭೇಟಿ ನೀಡಿದರು.

ಪಡುಮಾರ್ನಾಡಿನ ಬನ್ನಡ್ಕ ಸರಣಿ ಅಫಘಾತ ಸ್ಥಳಗಳಿಗೆ ಆದಿತ್ಯವಾರ ಭೇಟಿ ನೀಡಿ, ಅಲ್ಲಿನ ಕುಂದು ಕೊರತೆಗಳ ಪರಾಮರ್ಶೆ ನಡೆಸಿ ಸಾರ್ವಜನಿಕರೊಂದಿಗೆ ಮಾತನಾಡಿದ ನಂತರ ಕೇಮಾರು ಮಠಕ್ಕೆ ಅವರು ಭೇಟಿ ನೀಡಿದರು. ಕೇಮಾರು ಮಠದ ಶ್ರೀ ಈಶ ವಿಠ್ಠಲದಾಸ ಸ್ವಾಮೀಜಿ ಅವರೊಂದಿಗೆ ಕುಶಲೋಪಚಾರ ಮಾತನಾಡಿ ಅವರ ಆಶೀವಾ೯ದ ಪಡೆದರು.

ಕೇಮಾರು ಮತ್ತು ಕೊಲ್ಲೂರು ಶಾಖಾ ಮಠದ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ವಾಗ್ದಾನ ನೀಡಿದರು.
ಬ್ರಿಜೇಶ್ ಚೌಟರೊಂದಿಗೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುನಿಲ್ ಆಳ್ವ, ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಸಹಕಾರಿ ಧುರೀಣ ದಯಾನಂದ ಪೈ, ಯುವ ಮೋಚಾ೯ದ ಅಧ್ಯಕ್ಷ ಕುಮಾರ್ ಪ್ರಸಾದ್, ಪ್. ಕಾಯ೯ದಶಿ೯ ಭರತ್ ಶೆಟ್ಟಿ, ಪಾಲಡ್ಕ ಗ್ರಾ. ಪಂ. ನ ಮಾಜಿ ಉಪಾಧ್ಯಕ್ಷ ಸುಕೇಶ್ ಶೆಟ್ಟಿ ಕೇಮಾರು, ಪ್ರಮುಖರಾದ ಶಶಿಧರ್ ಅಂಚನ್ ಎನಿಕ್ರಿಪಲ್ಲ, ವಿಠ್ಠಲ್ ಮುಲ್ಕಿ, ಸುದಶ೯ನ್ ಆಚಾಯ೯ ಕೇಮಾರು, ಜೀವಂಧರ್ ಶೆಟ್ಟಿಗಾರ್,
ಚಂದ್ರ ಪೂಜಾರಿ, ಶಿವಪ್ರಸಾದ್ ಶೆಟ್ಟಿ, ರಂಜಿತ್ ಕೋಟ್ಯಾನ್, ಹರೀಶ್ ಪೂಜಾರಿ, ಶಾಶ್ವತ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Related posts

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಿಂದ ಕೆ. ಬಿ. ಜಯಪಾಲ ಶೆಟ್ಟಿ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ

Madhyama Bimba

ಮೂಡುಬಿದಿರೆಯಲ್ಲಿ ಗೂಡುದೀಪ, ರಂಗೋಲಿ ಸ್ಪರ್ಧೆ

Madhyama Bimba

ಮೂಡುಬಿದಿರೆ ತಾಲೂಕು ಜನಜಾಗೃತಿ ವೇದಿಕೆ- ಅಧ್ಯಕ್ಷರಾಗಿ ಮಿತ್ತಬೈಲು ವಾಸುದೇವ ನಾಯಕ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More