🔴ಕರ್ನಾಟಕ ಸರ್ಕಾರದಿಂದ ಕಾರ್ಕಳ ತಾಲೂಕು ಡಾ. ಬಿ. ಆರ್. ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ರಚನೆ
ಕಾರ್ಕಳ ತಾಲೂಕಿನ ಕಾಬೆಟ್ಟುವಿನಲ್ಲಿ ಮುಖ್ಯಮಂತ್ರಿಯಿಂದ ಉದ್ಘಾಟನೆಗೊಂಡ ನೂತನ ಡಾ. ಬಿ.ಆರ್. ಅಂಬೇಡ್ಕರ್ ಭವನದ ನಿರ್ವಹಣಾ ಸಮಿತಿಗೆ ಪದಾಧಿಕಾರಿಗಳನ್ನು ನೇಮಿಸಿ ಸರ್ಕಾರ ಆದೇಶಿಸಿದೆ.
ತಾಲೂಕು ತಹಶೀಲ್ದಾರ್ ಅಧ್ಯಕ್ಷರಾಗಿರುವ ಈ ಸಮಿತಿಯಲ್ಲಿ ಪುರಸಭಾ ಮಾಜಿ ಅಧ್ಯಕ್ಷೆ ಶ್ರೀಮತಿ ಪ್ರತಿಮಾ ರಾಣೆ, ದಲಿತ ಮುಖಂಡರುಗಳಾದ ಅಣ್ಣಪ್ಪ ನಕ್ರೆ ಹಾಗೂ ಸುರೇಶ್ ಚೇತನಹಳ್ಳಿ ಇವರುಗಳನ್ನು ಸದಸ್ಯರನ್ನಾಗಿ ಸರ್ಕಾರ ನಾಮ ನಿರ್ದೇಶಗೊಳಿಸಿ ಆದೇಶ ಹೊರಡಿಸಿದೆ.
