ಬೈಲೂರು, ಅಜೆಕಾರು, ಬೆಳ್ಮಣ್, ಮುನಿಯಾಲು ಈ ನಾಲ್ಕು ಕ್ಲಬ್ಗಳನ್ನೊಳಗೊಂಡ ರೀಜನ್ 6ರ ವಲಯಾಧ್ಯಕ್ಷರಾಗಿ ಎಂಜೆಎಫ್ ಪ್ರಶಾಂತ್ ಶೆಟ್ಟಿ ಬೈಲೂರು ಆಯ್ಕೆಯಾಗಿದ್ದಾರೆ.
ಮೇ. 31ರಂದು ಲಯನ್ಸ್ ಉಡುಪಿ ಜಿಲ್ಲಾ ಗವರ್ನರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಇವರನ್ನು ಆಯ್ಕೆ ಮಾಡಲಾಯಿತು. ಇವರು 2025-26ನೇ ಸಾಲಿನ ನೀರೆ ಬೈಲೂರು ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ಹಲವಾರು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದರು.
ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಶಿವಾಯ ಗೆಳೆಯರ ಬಳಗದ ಅಧ್ಯಕ್ಷರಾಗಿ, ಬೈಲೂರು ಬೀದಿ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
