ಕಾರ್ಕಳಹೆಬ್ರಿ

ಕೆರ್ವಾಶೆ ಬಂಗ್ಲೆಗುಡ್ಡೆ ಶಾಲಾ ನಾಯಕ – ಉಪನಾಯಕರ ಆಯ್ಕೆ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೆರ್ವಾಶೆ ಇಲ್ಲಿಯ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ನಾಯಕ ಹಾಗೂ ಉಪನಾಯಕರ ಚುನಾವಣೆಯನ್ನು ಇವಿಎಂ ಮೂಲಕ ಜೂ. 08ರಂದು ನಡೆಯಿತು.

ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪ್ರಿಸೈಡಿಂಗ್ ಆಫೀಸರ್ ಹಾಗೂ ಪೋಲಿಂಗ್ ಆಫೀಸರ್‌ಗಳಾಗಿ ಕರ್ತವ್ಯ ನಿರ್ವಹಿಸಿದರು. ಮತ ಎಣಿಕೆಯಲ್ಲಿ 5 ನೇ ತರಗತಿಯ ಸೃಶಾನ್ ಎಸ್. ಪೂಜಾರಿ ಅವರು ಅತಿ ಹೆಚ್ಚು ಮತಗಳನ್ನು ಪಡೆದು ಶಾಲಾ ನಾಯಕರಾಗಿ ಆಯ್ಕೆಯಾದರು. ಹಾಗೆಯೇ 4 ನೇ ತರಗತಿಯ ಸಹನ್ ವಿ. ನಾಯಕ್ ಅವರು ಶಾಲಾ ಉಪನಾಯಕರಾಗಿ ಆಯ್ಕೆಯಾದರು.

ಈ ಚುನಾವಣೆಯ ಮೂಲಕ ವಿದ್ಯಾರ್ಥಿಗಳು ಪ್ರಜಾಪ್ರಭುತ್ವ ವ್ಯವಸ್ಥೆ, ಮತದಾನದ ಮಹತ್ವ ಹಾಗೂ ಚುನಾವಣೆ ಹೇಗೆ ನಡೆಯುತ್ತದೆ ಎಂಬುದರ ಕುರಿತು ಸ್ಪಷ್ಟವಾದ ಅರಿವು ಪಡೆದುಕೊಂಡರು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಜವಾಬ್ದಾರಿ ಹಾಗೂ ನಾಗರಿಕ ಪ್ರಜ್ಞೆಯನ್ನು ಬೆಳೆಸುವಲ್ಲಿ ಈ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಿತು.

ಮುಖ್ಯೋಪಾಧ್ಯಾಯರು ಆಯ್ಕೆಯಾದ ಶಾಲಾ ನಾಯಕ ಹಾಗೂ ಉಪನಾಯಕರನ್ನು ಅಧಿಕೃತವಾಗಿ ಘೋಷಿಸಿ ಅಭಿನಂದಿಸಿದರು.

Related posts

ಹೆಬ್ರಿ ಎಸ್ ಆರ್ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಕುರಿತು ವಿಶೇಷ ಮಾರ್ಗದರ್ಶನ ಕಾರ್ಯಕ್ರಮ

Madhyama Bimba

ಅಲಯನ್ಸ್ ಕ್ಲಬ್ ಹೆಬ್ರಿ ಸಿಟಿ ಇದರ ಅಧ್ಯಕ್ಷರಾಗಿ ಸುನೀತ ಹೆಬ್ಬಾರ್ ಆಯ್ಕೆ

Madhyama Bimba

ಮೌಲ್ಯ ಸಂಗಮ ಸಮಾರೋಪ ಸಮಾರಂಭ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More