ಕಾರ್ಕಳ: ಕುಕ್ಕುಂದೂರು ಗ್ರಾಮದ ಅರ್ಬಿಪಾದೆ ಎಂಬಲ್ಲಿ ಅಕ್ರಮ ಶಿಲೆ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿಯ ಪ್ರಕರಣದಲ್ಲಿ 24 ಮಂದಿ ಆರೋಪಿಗಳಿಗೆ ಉಡುಪಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಸಂಚಾರಿ ನ್ಯಾಯಾಲಯ ಕಾರ್ಕಳ) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಖಚಿತ ಮಾಹಿತಿಯ ಮೇರೆಗೆ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ದಾಳಿ ನಡೆಸಿ ಕೂಲಿ ಕಾರ್ಮಿಕರನ್ನು ಹಾಗೂ ಗಣಿಗಾರಿಕೆಯಲ್ಲಿ ಬಳಸಿದ ಲಾರಿ, ಟಿಪ್ಪರ್ ಹಾಗೂ ಕಂಪ್ರೆಶ್ಯರ್ ವಶಪಡಿಸಿಕೊಂಡಿದ್ದರು.
ಈ ಪ್ರಕರಣದ ಪರವಾಗಿ ನ್ಯಾಯವಾದಿ ಬೈಲೂರು ಸದಾನಂದ ಸಾಲಿಯಾನ್ ವಾದಿಸಿದ್ದರು.
