ಕಾರ್ಕಳಹೆಬ್ರಿ

ಚಿಕ್ಕಲ್ ಬೆಟ್ಟು ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ: ನಿವೃತ್ತ ಮುಖ್ಯೋಪಾಧ್ಯಾಯರಾದ ಉದಯ ಶೆಟ್ಟಿ ದಂಪತಿಗೆ ಸನ್ಮಾನ

ಕಾರ್ಕಳ: ತಾಲೂಕಿನ ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 16 ವರ್ಷಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯೋಪಾಧ್ಯಾಯ ಉದಯ ಶೆಟ್ಟಿ ಬಿ. ಹಾಗೂ ಅವರ ಪತ್ನಿ ಶ್ರೀಮತಿ ಅಮಿತಾ ಉದಯ ಶೆಟ್ಟಿ ಅವರನ್ನು ಶಾಲೆಯಲ್ಲಿ ಆಯೋಜಿಸಿದ್ದ ‘ಗುರುವಂದನಾ’ ಕಾರ್ಯಕ್ರಮದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಜೀವ ಪೂಜಾರಿ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್‌ನ ನಿವೃತ್ತ ಮಹಾಪ್ರಬಂಧಕ ನಾಗರಾಜ್ ರಾವ್, ಮಾಜಿ ಪಂಚಾಯತ್ ಅಧ್ಯಕ್ಷ ಸಂತೋಷ್ ಶೆಟ್ಟಿ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿ ಪ್ರೀತೇಶ್ ಶೆಟ್ಟಿ ಭಾಗವಹಿಸಿದ್ದರು.

ವೇದಿಕೆಯಲ್ಲಿ ನಿವೃತ್ತ ಅಧ್ಯಾಪಕರಾದ ಜನಾರ್ಧನ ಹೆಗ್ಡೆ ಹೆಪ್ಪಳ, ನಿವೃತ್ತ ಮುಖ್ಯೋಪಾಧ್ಯಾಯರಾದ ಗೋವಿಂದ ಜೋಗಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ತಾರಾನಾಥ್ ಶೆಟ್ಟಿ, ದಿನೇಶ್ ಪೂಜಾರಿ, ಶ್ರೀಮತಿ ಭವ್ಯ, ಹಾಗೂ ಪ್ರಮುಖರಾದ ಜೀವಾನಂದ ಶೆಟ್ಟಿ ಯರ್ಲಪಾಡಿ, ಪ್ರಭಾಕರ ಹೆಗ್ಡೆ ಯರ್ಲಪಾಡಿ, ಮಹೇಶ್ ಶೆಟ್ಟಿ ಕಣಿಲ ಮತ್ತು ದಯಾನಂದ ಪ್ರಭು ಹೆಪ್ಪಳ ಉಪಸ್ಥಿತರಿದ್ದರು.

ಶಾಲೆಯ ಶಿಕ್ಷಕಿ ಶ್ರೀಮತಿ ಆಶಾ ಅವರು ವರದಿ ವಾಚಿಸಿದರು. ಶಿಕ್ಷಕ ವಿಜಯ ಸ್ವಾಗತಿಸಿದರು. ಶಿಕ್ಷಕಿ ಸ್ನೇಹ ಧನ್ಯವಾದ ಅರ್ಪಿಸಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಅಶ್ವಿನಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಸಂತ ಲಾರೆನ್ಸರ ವಾರ್ಷಿಕ ಮಹೋತ್ಸವದ ಭವ್ಯ ಸಮಾರೋಪ

Madhyama Bimba

ವಸತಿ ಶಾಲೆ ಪ್ರವೇಶಾತಿ : ಅರ್ಜಿ ಆಹ್ವಾನ

Madhyama Bimba

ಸೇನಾ ಪೂರ್ವ ಸಿದ್ಧತಾ ತರಬೇತಿ : ಅರ್ಜಿ ಸಲ್ಲಿಕೆ – ಅವಧಿ ವಿಸ್ತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More