ಕಾರ್ಕಳ

ಎಸ್.ವಿ.ಟಿ. ಶಾಲೆಯಲ್ಲಿ “ಸಾಹಿತ್ಯ-ಕಲೆ-ಸಾಂಸ್ಕೃತಿಕ ಸಂಘ” ಉದ್ಘಾಟನೆ

ಕಾರ್ಕಳದ ಎಸ್.ವಿ.ಟಿ. ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಸಾಹಿತ್ಯ-ಕಲೆ-ಸಾಂಸ್ಕೃತಿಕ ಸಂಘ”ದ ಉದ್ಘಾಟನೆಯು ಜೂ. 12ರಂದು ನಡೆಯಿತು.
ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮಾಲಿನಿ ಕೆ ಅಧ್ಯಕ್ಷತೆಯನ್ನು ವಹಿಸಿದ್ದರು.

ಸಾಹಿತ್ಯ ಸಂಘದ ಉದ್ಘಾಟನೆಯನ್ನು ದೇವದಾಸ್ ಕೆರೆಮನೆ ಇವರು ನೆರವೇರಿಸಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಸಿಗುವ ಎಲ್ಲಾ ಅವಕಾಶಗಳನ್ನು ಒಳ್ಳೆಯ ರೀತಿಯಲ್ಲಿ ಬಳಸಿಕೊಂಡು ಭವಿಷ್ಯವನ್ನು ಸುಂದರಗೊಳಿಸಿಕೊಳ್ಳಬೇಕು ಎಂದು ಹೇಳಿದರು.

ಕಲಾ ಮತ್ತು ಸಾಂಸ್ಕೃತಿಕ ಸಂಘವನ್ನು ಉದ್ಘಾಟಿಸಿದ ಶ್ರೀಮತಿ ಡಾ| ಹರ್ಷಾ ಕಾಮತ್ ವಿದ್ಯಾರ್ಥಿಗಳು ಬಾಲ್ಯದಿಂದಲೇ ಕಲೆ ಮತ್ತು ಸಂಸ್ಕೃತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಉತ್ತಮ ಸಂಸ್ಕಾರವಂತರಾಗಿ ಬೆಳೆಯಬಹುದು ಎಂದು ಅಭಿಪ್ರಾಯಪಟ್ಟರು.

ಅಧ್ಯಾಪಕ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಡಿ. 28: ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ 21ನೇ ಕನ್ನಡ ಸಾಹಿತ್ಯ ಸಮ್ಮೇಳನ

Madhyama Bimba

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ಅಪರೂಪದ ಹೃದಯ ಕಾಯಿಲೆಗೆ ಕನಿಷ್ಠ ಆಕ್ರಮಣಕಾರಿ (ಕನಿಷ್ಠ ಗಾಯ)ತಂತ್ರವನ್ನು ಬಳಸಿಕೊಂಡು ಯಶಸ್ವಿ ಚಿಕಿತ್ಸೆ – ಸಂಕೀರ್ಣವಾದ ಹೃದಯ ಕಾಯಿಲೆಯಾದ ರಪ್ಚರ್ಡ್ ಸೈನಸ್ ಆಫ್ ವಲ್ಸಲ್ವಾ ಅನ್ಯೂರಿಸಮ್ ಅನ್ನು ಸುಧಾರಿತ ಕನಿಷ್ಠ ಆಕ್ರಮಣಕಾರಿ ವಿಧಾನದ ಮೂಲಕ ಚಿಕಿತ್ಸೆ

Madhyama Bimba

ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಜೋಡುರಸ್ತೆ : ಸಹಕಾರ ಸಿಂಧೂರ ಲೋಕಾರ್ಪಣೆ ಮತ್ತು ಸೊಸೈಟಿಯ ತ್ರಿಂಶತಿ ಸಂಭ್ರಮ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More