ಕಾರ್ಕಳದ ಎಸ್ ವಿ ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ರ ಸಾಲಿನಿಂದ ಹೊಸದಾಗಿ ಸಂಗೀತ ತರಗತಿಯನ್ನು ಪ್ರಾರಂಭಿಸಲಾಯಿತು.
ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಕೆ.ಪಿ.ಶೆಣೈಯವರು ತರಗತಿಯ ಉದ್ಘಾಟನೆ ನೆರವೇರಿಸಿದರು.
ಸಂಗೀತ ಶಿಕ್ಷಕಿ ಶ್ರೀಮತಿ ಟಿ ಸಾಣೂರು ಮಾತನಾಡುತ್ತಾ, ಸಂಗೀತದಿಂದ ಮನೋರಂಜನೆಯ ಜೊತೆಗೆ ಜೀವನದ ಅನೇಕ ಸಮಸ್ಯೆಗಳಿಗೆ ಪರಿಹಾರವೂ ಸಿಗುತ್ತದೆ. ಹಾಗೆಯೇ ಈ ತರಗತಿಯಲ್ಲಿ ಶಾಸ್ತ್ರೀಯ ಸಂಗೀತದ ವಿವಿಧ ಪ್ರಕಾರಗಳಾದ ಕರ್ನಾಟಕ ಹಾಗೂ ಹಿಂದೂಸ್ತಾನಿ, ಜೊತೆಗೆ ಸುಗಮ ಸಂಗೀತ, ಭಾವಗೀತೆ, ಭಕ್ತಿಗೀತೆಗಳನ್ನೂ ವಿದ್ಯಾರ್ಥಿಗಳಿಗೆ ಕಲಿಸಲಾಗುವುದು ಎಂದು ತಿಳಿಸಿದರು.
ಮುಖ್ಯೋಪಾಧ್ಯಾಯಿನಿ ಹಾಗೂ ಅಧ್ಯಾಪಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
