ಕಾರ್ಕಳ: ಅನಾರೋಗ್ಯದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಜೂ. 16ರಂದು ವರದಿಯಾಗಿದೆ.
ಕಾಂತಾವರ ಗ್ರಾಮದ ಸುನೀಲ್ ಪೂಜಾರಿ (39) ಮೃತಪಟ್ಟವರು.
ಇವರು ೨೦೨೫ ಮಾ. ೨೧ರಂದು ದೂಪದಕಟ್ಟೆಯಲ್ಲಿ ಕೂಲಿ ಕೆಲಸ ಮಾಡುವಾಗ ಮರದಿಂದ ಬಿದ್ದು, ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ನಡೆದಾಡಲು ಆಗದೇ ಮನೆಯಲ್ಲಿಯೇ ಇದ್ದರು.
ಇತ್ತೀಚೆಗೆ ಇವರ ಆರೋಗ್ಯ ಹದಗೆಟ್ಟಿದ್ದು, ಮನೆಯಲ್ಲಿ ಮೃತಪಟ್ಟಿರುತ್ತಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
