ಕಾರ್ಕಳಮೂಡುಬಿದಿರೆಹೆಬ್ರಿ

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಪಡೀಲ್ ಮಂಗಳೂರು ಶಾಖೆ ದ. ಕ. ಜಿಲ್ಲಾಧಿಕಾರಿ ಕಾರ್ಯಾಲಯ ಪ್ರಜಾಸೌಧಕ್ಕೆ ಸ್ಥಳಾಂತರ

ರಾಜ್ಯದ ಮುಂಚೂಣಿಯ ಕ್ರೆಡಿಟ್ ಸಹಕಾರ ಸಂಘವಾದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ಪಡೀಲ್ ಶಾಖೆಯನ್ನು ದ. ಕ. ಜಿಲ್ಲಾಧಿಕಾರಿ ಕಾರ್ಯಾಲಯ ಪ್ರಜಾಸೌಧಕ್ಕೆ ಜೂ. 17ರಂದು ಸ್ಥಳಾಂತರ ಮಾಡಲಾಯಿತು.

ಉದ್ಘಾಟಕರಾಗಿ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ., ಐ.ಎ.ಎಸ್‌ರವರು ಮಾತನಾಡುತ್ತಾ ನಮ್ಮ ಕಛೇರಿ ಸಂಕೀರ್ಣದಲ್ಲಿ ಬ್ಯಾಂಕುಗಳ ಹಾಗೆಯೇ ಜನಸಾಮಾನ್ಯರಿಗೆ ಆರ್ಥಿಕ ಸವಲತ್ತುಗಳನ್ನು ನೀಡಿ ಜನರ ಆರ್ಥಿಕಅ ಭ್ಯುದಯಕ್ಕೆ ಕೊಡುಗೆಯನ್ನು ನೀಡುತ್ತಿರುವ ಸಹಕಾರ ಸಂಘಗಳಿಗೆ ಅವಕಾಶ ನೀಡಬೇಕು ಎಂಬ ನಿಟ್ಟಿನಲ್ಲಿ ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಶ್ರೀ ರಾಮಕೃಷ್ಣ ಸೊಸೈಟಿಗೆ ಅವಕಾಶ ಕಲ್ಪಿಸಲಾಗಿದೆ. ಶ್ರೀ ರಾಮಕೃಷ್ಣ ಸೊಸೈಟಿಯು ಹೆಚ್ಚು ಹೆಚ್ಚು ವಹಿವಾಟುಗಳನ್ನು ಮಾಡಿ ಇನ್ನಷ್ಟು ಅಭಿವೃದ್ಧಿಯನ್ನು ಕಾಣಲಿ ಎಂದು ಹಾರೈಸಿದರು.

ಸಭೆಯ ಮುಖ್ಯ ಅಭ್ಯಾಗತರಾದ ದಕ್ಷಿಣ ಕನ್ನಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ರಾಜು ಕೆ.,ಕೆ.ಎ.ಎಸ್, ರವರು ರಾಜ್ಯದಲ್ಲಿ ಸಹಕಾರ ಚಳವಳಿಯು ಗದಗದಲ್ಲಿ ಆರಂಭವಾಗಿದ್ದರೂ, ಅದು ಅತ್ಯುತ್ತಮವಾಗಿ ಪ್ರಗತಿಯನ್ನು ಹೊಂದಿ ಜನರ ವಿಶ್ವಾಸಕ್ಕೆ ಪಾತ್ರವಾಗಿರುವುದು ದಕ್ಷಿಣಕನ್ನಡ ಮತ್ತು ಉಡುಪಿ ಜಿಲೆಗಳಲ್ಲಿ. ಇದಕ್ಕೆ ಪೂರಕವಾಗಿ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯು ಒಳ್ಳೆಯ ಕೆಲಸ ಮಾಡುತ್ತಿದ್ದು, ಇನ್ನಷ್ಟು ಯಶಸ್ಸನ್ನು ಕಾಣಲಿ ಎಂದು ಹಾರೈಸಿದರು.

ಭದ್ರತಾ ಕೊಠಡಿಯನ್ನು ಉದ್ಘಾಟಿಸಿದ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್. ಎನ್. ರಮೇಶ್, ಕೆ.ಎ.ಎಸ್, ರವರು ಪಡೀಲ್ ಶಾಖೆಯು ಸ್ಥಾಪನೆಯ ಕಿರು ಅವಧಿಯಲ್ಲಿ ಒಳ್ಳೆಯ ಪ್ರಗತಿಯನ್ನು ಸಾಧಿಸಿದೆ. ಪ್ರತಿಷ್ಟಿತ ಸಂಕೀರ್ಣಕ್ಕೆ ಸ್ಥಳಾಂತರಗೊಂಡು ವ್ಯವಹಾರವನ್ನು ಇನ್ನಷ್ಟು ವೃದ್ಧಿಪಡಿಸಲಿ ಎಂದು ಹಾರೈಸಿದರು.

ಸಭಾಧ್ಯಕ್ಷತೆಯನ್ನು ವಹಿಸಿದ ಸಂಘದ ಅಧ್ಯಕ್ಷರಾದ ಕೆ. ಜೈರಾಜ್ ಬಿ. ರೈಯವರು ಸಂಘದ ಕಾರ್ಯವೈಖರಿಯನ್ನು ವಿವರಿಸಿ ಸಂಘದ ಪಡೀಲ್ ಶಾಖೆಗೆ ಸ್ಥಳಾವಕಾಶವನ್ನು ಒದಗಿಸಿಕೊಟ್ಟು ಸಹಕರಿಸಿದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಡಳಿತಕ್ಕೆ ಧನ್ಯವಾದಗಳನ್ನು ತಿಳಿಸಿದರು.

ಸಂಘದ ಉಪಾಧ್ಯಕ್ಷರಾದ ಶ್ರೀಮತಿ ಲಕ್ಷ್ಮಿ ಜಯಪಾಲ ಶೆಟ್ಟಿಯವರ ಸಂದೇಶವನ್ನು ವಾಚಿಸಲಾಯಿತು.
ಸಂಘದ ನಿರ್ದೇಶಕರಾದ ಕೆ. ಸೀತಾರಾಮ ರೈ ಸವಣೂರು ಸ್ವಾಗತಿಸಿದರು. ಸಂಘದ ನಿರ್ದೇಶಕರುಗಳಾದ ಪಿ. ಶಿವರಾಮ ಅಡ್ಯಂತಾಯ, ವಿಠಲ ಪಿ. ಶೆಟ್ಟಿ, ಪಿ.ಬಿ. ದಿವಾಕರ ರೈ, ಕುಂಬ್ರದಯಾಕರ ಆಳ್ವ, ಬೆಳ್ಳಿಪಾಡಿ ಪ್ರಸಾದ್‌ಕೌಶಲ್ ಶೆಟ್ಟಿ, ಅರಿಯಡ್ಕ ಚಿಕ್ಕಪ್ಪ ನಾಕ್ ಹಾಗೂ ಡಾ| ಬಿ. ಸಂಜೀವ ರೈ ಮತ್ತು ಮಹಾಪ್ರಬಂಧಕರಾದ ಗಣೇಶ್ ಜಿ. ಕೆ. ಉಪಸ್ಥಿತರಿದ್ದರು.

ಪಡೀಲ್ ಶಾಖಾ ಉಸ್ತುವಾರಿ ನಿರ್ದೇಶಕರಾದ ಎಂ. ರಾಮಯ ಶೆಟ್ಟಿ ವಂದನಾರ್ಪಣೆ ನೀಡಿದರು. ಶಾಖಾಧಿಕಾರಿಯವರಾದ ಶ್ರೀಮತಿ ಅಶ್ವಿನಿ ಎಸ್. ಶೆಟ್ಟಿ ಪ್ರಾರ್ಥಿಸಿದರು. ಕೇಂದ್ರಕಛೇರಿ ವ್ಯವಸ್ಥಾಪಕರಾದ ಶಮಂತ್ ಟಿ. ರೈ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ  ವರ್ಧಂತ್ಯುತ್ಸವ ಗಣ್ಯರ ಶುಭಾಶಯ

Madhyama Bimba

ಮುನಿಯಾಲು ಗೋಧಾಮದಲ್ಲಿ ಶ್ರೀಮನ್ನಾಗಮಂಡಲ – ಶಾಸಕ ಸುನಿಲ್ ಕುಮಾರ್ ಭೇಟಿ

Madhyama Bimba

ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಹೃದಯ ರೋಗಿಗಳಿಗೆ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More