ಮೂಡುಬಿದಿರೆ

 ಮಿಜಾರು ಕೆಪಿಎಸ್ ಶಾಲೆ ನೂತನ ಕೊಠಡಿ ನಿರ್ಮಾಣಕ್ಕೆ ಸ್ಥಳೀಯರು ವಿರೋಧ

ಸಹಸ್ರಾರು ಜನರಿಗೆ ಶಿಕ್ಷಣ ಬೋಧಿಸಿರುವ ಮಿಜಾರಿನ ಕರ್ನಾಟಕ ಪಬ್ಲಿಕ್ ಶಾಲಾ ಮೈದಾನ ( ಬಂಗಬೆಟ್ಟು ಶಾಲಾ ಮೈದಾನ) ದಲ್ಲಿ ಪ್ರಾರಂಭವಾಗಿರುವ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ವಿರೋಧಿಸಿ ತೋಡಾರು- ಮಿಜಾರು ಗ್ರಾಮದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.


ಶಾಲೆಯ ಹೆಸರಿನಲ್ಲಿ 2.95 ಎಕರೆ ಜಾಗವಿದ್ದು ಅದರಲ್ಲಿ 95 ಸೆನ್ಸ್ ಜಾಗವನ್ನು ಮಿಜಾರಿನ ಸರಕಾರಿ ಹೈಸ್ಕೂಲ್, ಪದವಿಪೂರ್ವ ಕಾಲೇಜು ಆಗುವಾಗ ಬಿಟ್ಟುಕೊಡಲಾಗಿತ್ತು. ಉಳಿದ ಎರಡು ಎಕರೆ ಜಾಗದಲ್ಲಿ ಆಟದ ಬಯಲು ಇದೆ. ಈಗ ಮಿಜಾರು ಕೆ.ಪಿ.ಎಸ್.ಶಾಲೆಯೆಂದು ಬದಲಾಗಿರುವುದರಿಂದ ಮತ್ತೆ ನಾಲ್ಕು ಕೊಠಡಿಗಳು ಮಂಜೂರಾಗಿದೆ. ಆ ಕೊಠಡಿಗಳನ್ನು ಆಟದ ಬಯಲಿನಲ್ಲಿ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಈ ಕೊಠಡಿಗಳ ಬೇರೆ ಕಡೆ ನಿರ್ಮಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಹೊಸಕೊಠಡಿಗಳ ಗುದ್ದಲಿಪೂಜೆ ಆದ ಸಂದರ್ಭದಲ್ಲೂ ಗ್ರಾಮಸ್ಥರು ಪ್ರತಿಭಟಿಸಿ ಪತ್ರಿಕಾಗೋಷ್ಠಿ ಮಾಡಿ ವಿರೋಧ ವ್ಯಕ್ತಪಡಿಸಿದ್ದರು.
ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ತಮ್ಮ ಮನವಿ ಸಲ್ಲಿಸಿದ್ದ ಗ್ರಾಮಸ್ಥರು ಇಂದು ಮತ್ತೊಮ್ಮೆ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.

ತಾ.ಪಂ.ಮಾಜಿ ಸದಸ್ಯ ಎಂ.ಜಿ.ಮುಹಮ್ಮದ್, ಗ್ರಾ.ಪಂ.ಮಾಜಿ ಸದಸ್ಯರಾದ ಹರಿಪ್ರಸಾದ್ ಶೆಟ್ಟಿ, ಎಂ.ಎ.ಅಶ್ರಫ್, ಪ್ರಮುಖರಾದ ಹಫೀಝ್ ತೋಡಾರ್, ಇಸ್ಮಾಯಿಲ್, ರಿಝ್ವಾನ್ ಮತ್ತಿತರರು ಇದ್ದರು.

 

Related posts

 ನಿಡ್ಡೋಡಿ ಗಂಗಾಧರ ಶೆಟ್ಟಿ ಇನ್ನಿಲ್ಲ

Madhyama Bimba

ಎಲ್‌ಪಿಜಿ ಸರಬರಾಜು ಬಗ್ಗೆ ಕರ್ನಾಟಕ ಸರ್ಕಾರ ಮಹತ್ವದ ಕ್ರಮ

Madhyama Bimba

ಬಿಲ್ಲವರು, ಬಂಟರು, ಹಾಗೂ ಮೊಗವೀರರು ಒಂದೇ ತಾಯಿಯ ಮಕ್ಕಳು – ಗುರುನಾರಾಯಣ ಸಂಘದ ಅಮೃತ ಮಹೋತ್ಸವದಲ್ಲಿ ಡಾ. ಮೋಹನ್ ಆಳ್ವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More