ಕಾರ್ಕಳ

ಕಾರ್ಕಳ ಜ್ಞಾನಸುಧಾ : ವಿಶ್ವಯೋಗ ದಿನಾಚರಣೆ

ನಿತ್ಯ ಜೀವನದಲ್ಲಿ ಯೋಗ ಮಾಡುವುದರಿಂದ ಸದಾ ಆರೋಗ್ಯವಂತರಾಗಿ ಇರಲು ಸಾಧ್ಯ ಎಂದು ಜ್ಞಾನಸುಧಾದ ಪೂರ್ವ ವಿದ್ಯಾರ್ಥಿನಿ, ಮಾಹೆಯ ಯೋಗಕೇಂದ್ರದ ಅಸಿಸ್ಟೆಂಟ್ ಪ್ರೊಫೆಸರ್ ಆಗಿರುವ ಡಾ.ಆತ್ಮಿಕ ಶೆಟ್ಟಿ ಹೇಳಿದರು.


ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ಆವರಣದಲ್ಲಿ ನಡೆದ ವಿಶ್ವಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಯೋಗದ ಮಹತ್ವವನ್ನು ಪ್ರಾತ್ಯಾಕ್ಷಿಕೆಯ ಮೂಲಕ ಪ್ರಸ್ತುತಪಡಿಸಿದರು.


ಕಾರ್ಯಕ್ರಮದಲ್ಲಿ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲರಾದ ದಿನೇಶ್ ಎಂ ಕೊಡವೂರ್, ಉಪ್ರಪ್ರಾಂಶುಪಾಲರುಗಳಾದ ಸಾಹಿತ್ಯ ಹಾಗೂ ಶ್ರೀಮತಿ ಉಷಾ ರಾವ್‌ಯು ಮತ್ತು ದೈ.ಶಿ.ನಿರ್ದೇಶಕಿ ಶ್ರೀಮತಿ ಸೌಜನ್ಯ ಹೆಗ್ಡೆ ಉಪಸ್ಥಿತರಿದ್ದರು.

ಆಗ್ಲಭಾಷಾ ಉಪನ್ಯಾಸಕಿ ಕು.ದಿವ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಕ್ರೈಸ್ಟ್‌ಕಿಂಗ್: ವಿಶ್ವ ಪರಿಸರ ದಿನಾಚರಣೆ

Madhyama Bimba

ಕಾರ್ಕಳ ಜ್ಞಾನಸುಧಾ: ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಚಟುವಟಿಕೆಗಳ ಉದ್ಘಾಟನೆ

Madhyama Bimba

ಕಾರ್ಕಳ: ಗ್ರಾಹಕರ ಮನಗೆಲ್ಲಲು ಸಜ್ಜಾದ ‘ಎನ್‌ಪಿ ಚಿಲ್ ಸ್ಟೇಷನ್’ ಎಸಿ ಐಸ್‌ಕ್ರೀಮ್ ಪಾರ್ಲರ್ ಉದ್ಘಾಟನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More