ಕಾರ್ಕಳ

ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನಲ್ಲಿ ಕ್ಲಬ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

ಸಾಣೂರು : ರಾಜೇಶ್ವರಿ ನ್ಯಾಷನಲ್ ಸ್ಕೂಲ್, ಸಾಣೂರಿನಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿವಿಧ ಕ್ಲಬ್‌ಗಳ ಉದ್ಘಾಟನಾ ಸಮಾರಂಭವು ಜೂ.23ರಂದು ಶಾಲಾ ಆವರಣದಲ್ಲಿ ನಡೆಯಿತು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್ ಆಳ್ವ ಭಾಗವಹಿಸಿ ವಿವಿಧ ಕ್ಲಬ್‌ಗಳ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸಿ ಬೆಳೆಸಲು ಹಾಗೂ ಅವರ ವ್ಯಕ್ತಿತ್ವವನ್ನು ರೂಪಿಸಲು ಕ್ಲಬ್‌ಗಳು ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಸಾಧನೆಯ ಕನಸು ಕಾಣಬೇಕು. ಆ ಕನಸು ಸಾಕಾರಗೊಳ್ಳುವವರೆಗೆ ನಿರಂತರ ಪ್ರಯತ್ನ ನಡೆಸಬೇಕು. ಕನಸನ್ನು ಹುಡುಕಿಕೊಂಡು ಹೋಗಿ ಅದನ್ನು ನನಸಾಗಿಸಬೇಕು. ವಿದ್ಯಾರ್ಥಿಗಳ ಮನಸ್ಸು ಸುಂದರವಾದ ದೇಗುಲದಂತಿದ್ದು, ಇತರರ ಯಶಸ್ಸಿಗೆ ಕಾರಣರಾಗುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಅಲ್ಲದೆ, ವಿದ್ಯಾರ್ಥಿಗಳು ಕ್ಲಬ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು” ಎಂದು ಪ್ರೋತ್ಸಾಹಿಸಿದರು.


ಈ ಸಂದರ್ಭದಲ್ಲಿ ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. “ವಿದ್ಯಾರ್ಥಿಗಳಿಗೆ ನಾಲ್ಕು ಗೋಡೆಗಳ ಶಿಕ್ಷಣ ಮಾತ್ರವಲ್ಲದೆ ಅದನ್ನು ಮೀರಿದ ಅನುಭವಾಧಾರಿತ ಶಿಕ್ಷಣವೂ ದೊರೆಯಬೇಕು. ಕಾರ್ಯಕ್ರಮಗಳು ಕೇವಲ ಆಚರಣೆಗೆ ಸೀಮಿತವಾಗದೆ ಕಾರ್ಯರೂಪಕ್ಕೆ ಬರಬೇಕು. ವಿದ್ಯಾರ್ಥಿಗಳು ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಆದರ್ಶ ಪ್ರಜೆಗಳಾಗಬೇಕು” ಎಂದು ಕರೆ ನೀಡಿದರು.


ಈ ಶೈಕ್ಷಣಿಕ ವರ್ಷದಲ್ಲಿ ಯೋಗ ಕ್ಲಬ್, ಪರಿಸರ ಕ್ಲಬ್, ಭಾಷಾ ಮತ್ತು ಸಾಹಿತ್ಯ ಕ್ಲಬ್, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಲಬ್, ಸಾಂಸ್ಕೃತಿಕ ಕ್ಲಬ್, ಕ್ರೀಡಾ ಕ್ಲಬ್ ಹಾಗೂ ಸ್ಕೌಟ್ ಮತ್ತು ಗೈಡ್ಸ್ ಕ್ಲಬ್‌ಗಳನ್ನು ಉದ್ಘಾಟಿಸಲಾಯಿತು. ವಿದ್ಯಾರ್ಥಿಗಳ ಪ್ರತಿಭೆ, ನಾಯಕತ್ವ ಗುಣ, ಸೃಜನಶೀಲತೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ಈ ಕ್ಲಬ್‌ಗಳು ಕಾರ್ಯನಿರ್ವಹಿಸಲಿವೆ.


ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಡಾ. ರಶ್ಮಿ ರಾಜ್, ಮುಖ್ಯೋಪಾಧ್ಯಾಯರಾದ ಪ್ರಣವ್ ಭಟ್, ಕಾರ್ಯನಿರ್ವಹಣಾ ಅಧಿಕಾರಿ ದೀಪು ಶೆಟ್ಟಿ ಹಾಗೂ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಜೀವನ್ ಪಿಂಟೋ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಕ್ಲಬ್ ಗಳ ಸಂಯೋಜನಾಧಿಕಾರಿಯಾದ ಶ್ರೀಮತಿ ಧನ್ಯರವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಒಗ್ಗಟ್ಟಿನಿಂದ ಕಲಿತು, ಮುನ್ನಡೆಸಿ ಹಾಗೂ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಂಕಲ್ಪಗೈದರು.
ವಿದ್ಯಾರ್ಥಿಗಳು ಪ್ರಾರ್ಥಿಸಿದರು. ವಿದ್ಯಾರ್ಥಿನಿಯಾದ ಆರುಷಿ ಪ್ರಭು ಸ್ವಾಗತಿಸಿದರು. ವಿದ್ಯಾರ್ಥಿನಿ ದೇಶ್ನ ಕಾರ್ಯಕ್ರಮ ನಿರೂಪಿಸಿ. ಡೆಲಿಷ ರೀಷಲ್ ಕ್ಯಾಸ್ಟಲಿನೊ ವಂದಿಸಿದರು.

 

Related posts

ಕಾರ್ಕಳ: ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಜನಜಾಗೃತಿ ಜಾಥಾ ಕಾರ್ಯಕ್ರಮ

Madhyama Bimba

ಕುಕ್ಕುಂದೂರಿನ ಮೇಲ್ಜಡ್ಡು ನಿವಾಸಿ ಜಯಂತಿ ಆಚಾರ್ಯರ ಮನೆಗೆ ವಿಶ್ವಕರ್ಮ ಸಂಘಟನೆಗಳ ಭೇಟಿ

Madhyama Bimba

ಕಾರ್ಕಳ ಮಹಾಮಸ್ತಕಾಭಿಷೇಕ ಹಿನ್ನಲೆಯಲ್ಲಿ ಶ್ರೀ ಕೂಷ್ಮಾಂಡಿನಿ ಜೈನ ಬಸದಿ ಸಭಾಭವನ ನಿರ್ಮಾಣಕ್ಕೆ 50.00 ಲಕ್ಷ ಅನುದಾನ ಬಿಡುಗಡೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More