ಕಾರ್ಕಳಹೆಬ್ರಿ

ಕಾನೂನು ಬಾಹಿರ ರಸ್ತೆ ಆಗೆತದಿಂದ ಸಾರ್ವಜನಿಕರಿಗೆ ಸಂಕಷ್ಟ ವಾಹನ ಸವಾರರ ಗೋಳು ಕೇಳೋರು ಯಾರು – ಅಧಿಕಾರಿಗಳ ದಿವ್ಯ ಮೌನಕ್ಕೆ ಖಂಡನೆ-ಸುರೇಶ್ ಶೆಟ್ಟಿ ಶಿವಪುರ

ಮುನಿಯಾಲು-ಪಡುಕುಡೂರು-ಶಿವಪುರ ರಸ್ತೆಯ ಶಿವಪುರ ಮತ್ತೆ ಮುನಿಯಲು ಭಾಗದ ಜನರಿಗೆ ಅತಿ ಪ್ರಮುಖ ಸಂಪರ್ಕ ರಸ್ತೆಯಾಗಿತ್ತು ಲೋಕೋಪಯೋಗಿ ಇಲಾಖೆ ಆಧೀನದಲ್ಲಿದ್ದು ಈ ರಸ್ತೆಯನ್ನು ಕಳೆದ ಬೇಸಿಗೆ ಕಾಲದಲ್ಲಿ ಯಾವುದೇ ಟೆಂಡರ್ ಪಡೆಯದೆ ಎಕಾಏಕಿ ಕಾರ್ಕಳದ ಕಾಂಗ್ರೆಸ್ ಮುಖಂಡ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರು ಕಾನೂನು ಬಾಹಿರವಾಗಿ ಇಲಾಖೆಯ ಅನುಮತಿ ಇಲ್ಲದೆ ತನ್ನ ಯಂತ್ರೋಪಕರಣ ಮತ್ತು ವಾಹನಗಳನ್ನು ಉಪಯೋಗಿಸಿ ರಸ್ತೆ ಅಗೆದು ಬಿಟ್ಟಿರುವುದರಿಂದ ಇದೀಗ ಮಳೆಗಾಲ ಆರಂಭವಾಗಿ ರಸ್ತೆಗಳಲ್ಲಿ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು ವಾಹನ ಸವಾರರು ವಾಹನ ಚಲಾಯಿಸಲಾಗದೆ ಪರದಾಡುತ್ತಿದ್ದಾರೆ. ಯಾರೋ ಮಾಡಿದ ಹೇಯ ಕೃತ್ಯಕ್ಕೆ ಈ ಭಾಗದ ಜನರು ಸಂಕಷ್ಟ ಅನುಭವಿಸುವಂತಾಗಿದೆ.


ಈ ರಸ್ತೆಯು ಸಾವಿರಾರು ವಾಹನಗಳು ಸಂಚರಿಸುವ ಪ್ರಮುಖ ರಸ್ತೆಯಾಗಿದ್ದು ಇಂತಹ ಪ್ರಮುಖ ರಸ್ತೆಯನ್ನು ಅಗೆದು ಹಾಳು ಮಾಡಿದರೂ ಕೂಡ ರಸ್ತೆ ಆಗೆದವರ ಮೇಲೆ ಕಾನೂನು ಕ್ರಮ ಆಗದೇ ಇರುವುದು ಆಶ್ಚರ್ಯ ತಂದಿದೆ. ಇದರ ಹಿಂದೆ ಯಾರ ಕೈವಾಡ ಇದೆ.? ಅಧಿಕಾರಿಗಳ ಮೌನ ಏನನ್ನು ಹೇಳುತ್ತಿದೆ.? ರಾಜ್ಯದಲ್ಲಿ ತನ್ನ ಪಕ್ಷದ ಸರ್ಕಾರ ಇದೆ ಎಂಬ ದರ್ಪ ದಲ್ಲಿ ರಸ್ತೆ ಅಗೆತ ಮಾಡಿರುವುದು ಎಷ್ಟು ಸರಿ. ಕಾರ್ಕಳ ಕ್ಷೇತ್ರದಲ್ಲಿ ಬೇರೆ ಯಾವುದೇ ಅಭಿವೃದ್ಧಿ ಚಟುವಟಿಕೆಗಳು ನಡೆದರು ಅದು ನಾನೆ ಮಾಡಿದ್ದು ಎಂದು ಪೋಸ್ಟ್ ಹಾಕುವ ಮುನಿಯಾಲು ಉದಯ ಶೆಟ್ಟಿಯವರು ಅಕ್ರಮವಾಗಿ ತನ್ನ ಯಂತ್ರಗಳಿಂದ ಸಾರ್ವಜನಿಕ ರಸ್ತೆ ಅಗೆದು ಸಾರ್ವಜನಿಕರು ಅನುಭವಿಸುವ ತೊಂದರೆ ಕಣ್ಣೆದುರು ಕಂಡರೂ ಕಣ್ಣಿಗೂ ಕಾಣದಂತೆ ವರ್ತಿಸುತ್ತಿದ್ದು ಇದನ್ನು ನೋಡಿದರೆ ಈ ಭಾಗದ ಜನತೆಗೆ ತೊಂದರೆ ಕೊಡುವುದೇ ಇದರ ಮುಖ್ಯ ಉದ್ದೇಶದಂತೆ ಭಾಸವಾಗುತ್ತಿದೆ.


ಕಾನೂನುಬಾಹಿರವಾಗಿ ರಸ್ತೆ ಆಗಿದಿರುವ ಬಗ್ಗೆ ಶಾಸಕರು ಹಾಗೂ ಸ್ಥಳೀಯರೂ ಇಲಾಖೆಗೆ ದೂರು ಕೊಟ್ಟಿದ್ದರೂ ಯಾವುದೇ ಕ್ರಮವಾಗದೇ ಇರುವುದು ಸ್ಥಳೀಯ ಸಾರ್ವಜನಿಕರಲ್ಲಿ ಅಧಿಕಾರಿಗಳ ನಡೆಯ ಮೇಲೆ ಸಂಶಯ ವ್ಯಕ್ತವಾಗುತ್ತದೆ. ಇದೇ ಜಾಗದಲ್ಲಿ ಬೇರೆ ಯಾರಾದರೂ ಒಂದು ಇಂಚು ರಸ್ತೆ ಆಗಿದಿದ್ದರೂ ಕ್ರಮ ಕೈಗೊಳ್ಳುವ ಇಲಾಖೆ ಇಲ್ಲಿ ಇಷ್ಟು ಅಕ್ರಮ ಕೆಲಸ ಮಾಡಿದ್ದರೂ ಮೌನ ವಹಿಸಿರುವುದು ಯಾಕೆ? ಈ ಕೂಡಲೇ ಅಧಿಕಾರಿಗಳು ಇದರ ಕುರಿತು ಗಮನ ಹರಿಸಿ ರಸ್ತೆಯನ್ನು ಸಂಚಾರ ಯೋಗ್ಯ ರಸ್ತೆಯನ್ನಾಗಿಸಿ ಕೊಡಿ. ಸುಮಾರು ಒಂದು ಕಿಲೋಮೀಟರ್ ರಸ್ತೆಯಲ್ಲಿ ವಾಹನ ಸಂಚಾರ ಮಾಡುವುದು ಕಷ್ಟವಾಗಿದೆ ಇಲ್ಲಿಯ ಜನರು ಪರ್ಯಾಯ ಮಾರ್ಗ ಹುಡುಕುವ ಅನಿವಾರ್ಯತೆ ಆಗಿದೆ ಅದರಲ್ಲೂ ದ್ವಿಚಕ್ರ ವಾಹನದವರಂತೂ ಸಂಚರಿಸಲು ಸಾಧ್ಯವೇ ಇಲ್ಲ ಆದ್ದರಿಂದ ಮಾನ್ಯ ಉದಯ ಶೆಟ್ಟಿ ಅವರಿಗೆ ನಿಜವಾಗಿಯೂ ಜನರ ಕುರಿತು ಕಾಳಜಿ ಇದ್ದರೆ ತಾನು ಮಾಡಿದ ತಪ್ಪನ್ನು ಅರಿತುಕೊಂಡು ಈ ಭಾಗದ ಜನರಲ್ಲಿ ಕ್ಷಮೆಯಾಚಿಸಿ ಇಲಾಖೆಗೆ ದಂಡ ಕಟ್ಟಬೇಕು. ನಂತರ ಇಲಾಖೆ ಈ ರಸ್ತೆಯನ್ನು ಸಾರ್ವಜನಿಕ ಸುಗಮ ಸಂಚಾರಕ್ಕೆ ಸಿದ್ದ ಮಾಡಿ ಕೊಡಬೇಕಾಗಿ ಈ ಭಾಗದ ಜನತೆಯ ಪರವಾಗಿ ನಮ್ಮ ಆಗ್ರಹ. ಇದು ತಪ್ಪಿದಲ್ಲಿ ಈ ಭಾಗದ ಜನತೆ ಅದೇ ರಸ್ತೆಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಕಾರ್ಕಳ ಮಂಡಲ ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಶಿವಪುರ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

 

Related posts

ಬಾಲ್ಯ ವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯತ್‌ಗಳಿಗೆ ಪ್ರಶಸ್ತಿ: ಪ್ರಸ್ತಾವನೆ ಆಹ್ವಾನ

Madhyama Bimba

ಕಾರ್ಕಳ: “ಸ್ವಚ್ಚ ವಿಚಾರ್ ” ಸಂವಾದ ಕಾರ್ಯಕ್ರಮ

Madhyama Bimba

ಕಾರ್ಕಳ: ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More