ಪತ್ರಕರ್ತ ಜಗದೀಶ್ ಪೂಜಾರಿ ಅವರ ಮನೆಯ ಮೇಲೆ ಸೋಮವಾರ ರಾತ್ರಿ ಸುರಿದ ಭಾರಿ ಗಾಳಿ-ಮಳೆಗೆ ಮರವೊಂದು ಬಿದ್ದು ಮನೆಯು ಭಾಗಶಃ ಹಾನಿಗೊಳಗಾಗಿದೆ.
ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ಪೂಪಾಡಿಕಲ್ಲಿನಲ್ಲಿ ಈ ಘಟನೆ ನಡೆದಿದೆ.
ರಾತ್ರಿ ಸುರಿದ ಗಾಳಿ-ಮಳೆಯ ತೀವ್ರತೆಗೆ ಮನೆಯ ಸಮೀಪದಲ್ಲಿದ್ದ ಮರವೊಂದು ಉರುಳಿ ಮನೆಯ ಮೇಲ್ಛಾವಣಿಗೆ ಬಿದ್ದ ಪರಿಣಾಮ ಮನೆಯ ಒಂದು ಭಾಗಕ್ಕೆ ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಗ್ರಾಮ ಆಡಳಿತ ಅಧಿಕಾರಿ ಶ್ರೀನಿವಾಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
