ಮೂಡುಬಿದಿರೆ

ಗಾಳಿ-ಮಳೆಗೆ ಮನೆ ಹಾನಿ

ಪತ್ರಕರ್ತ ಜಗದೀಶ್ ಪೂಜಾರಿ ಅವರ ಮನೆಯ ಮೇಲೆ ಸೋಮವಾರ ರಾತ್ರಿ ಸುರಿದ ಭಾರಿ ಗಾಳಿ-ಮಳೆಗೆ ಮರವೊಂದು ಬಿದ್ದು ಮನೆಯು ಭಾಗಶಃ ಹಾನಿಗೊಳಗಾಗಿದೆ.

ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ಪೂಪಾಡಿಕಲ್ಲಿನಲ್ಲಿ ಈ ಘಟನೆ ನಡೆದಿದೆ.

ರಾತ್ರಿ ಸುರಿದ ಗಾಳಿ-ಮಳೆಯ ತೀವ್ರತೆಗೆ ಮನೆಯ ಸಮೀಪದಲ್ಲಿದ್ದ ಮರವೊಂದು ಉರುಳಿ ಮನೆಯ ಮೇಲ್ಛಾವಣಿಗೆ ಬಿದ್ದ ಪರಿಣಾಮ ಮನೆಯ ಒಂದು ಭಾಗಕ್ಕೆ ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಗ್ರಾಮ ಆಡಳಿತ ಅಧಿಕಾರಿ ಶ್ರೀನಿವಾಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Related posts

ಶ್ರೀ ಮಹಾವೀರ ಕಾಲೇಜಿನಲ್ಲಿ ಎರಡನೇ ಹಂತದ ಉದ್ಯೋಗ ಮೇಳ

Madhyama Bimba

ಪಡುಮಾರ್ನಾಡು ಪಂಚಾಯತ್ ಗೆ ಗಾಂಧಿ ಗ್ರಾಮ ಪುರಸ್ಕಾರ

Madhyama Bimba

ಕಟ್ಟಡ ಕಾರ್ಮಿಕರ ಪಿಂಚಣಿ ಬಿಡುಗಡೆಗೆ ಆಗ್ರಹ: ವಸಂತ ಆಚಾರಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More