ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣದ ಉದ್ದೇಶದಿಂದ ಬೈಲೂರು ಪೇಟೆಯಲ್ಲಿ ಕಾರ್ಕಳ ಜ್ಞಾನಸುಧಾಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ಜೂ.30ರಂದು ರಿಕ್ಷಾಚಾಲಕರಿಗೆ ಬೀಜದುಂಡೆಗಳನ್ನು ವಿತರಿಸಿ ಪರಿಸರ ಜಾಗೃತಿ ಮೂಡಿಸಿದರು.

ಕಾರ್ಕಳ ರಿಕ್ಷಾ ಚಾಲಕ-ಮಾಲಕ ಸಂಘದ ಅಧ್ಯಕ್ಷರು ಹಾಗೂ ವಕೀಲರಾದ ಸದಾನಂದ ಸಾಲಿಯಾನ್ ರಿಕ್ಷಾಚಾಲಕರು ಸಂಚಾರದ ವೇಳೆ ರಸ್ತೆ ಬದಿಗಳು, ಖಾಲಿ ಜಾಗಗಳು, ಹಾಗೂ ಮರಗಳ ಕೊರತೆಯಿರುವ ಪ್ರದೇಶಗಳಲ್ಲಿ ಬೀಜದುಂಡೆಗಳನ್ನು ಎಸೆಯುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲಿ ರಿಕ್ಷಾಚಾಲಕರು ವಿದ್ಯಾರ್ಥಿಗಳ ಪರಿಸರ ಕಾಳಜಿಯನ್ನು ಮೆಚ್ಚಿ, ಬೀಜದುಂಡೆಗಳನ್ನು ಸೂಕ್ತ ಸ್ಥಳಗಳಲ್ಲಿ ಬಿತ್ತರಿಸಿ ಹಸಿರು ಪರಿಸರ ನಿರ್ಮಾಣಕ್ಕೆ ತಮ್ಮ ಸಹಕಾರ ನೀಡುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕು ತೋಟಗಾರಿಕಾ ಇಲಾಖೆಯ ರಮೇಶ್ ಉಳ್ಳಾಗಡ್ಡಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಈ ವಿನೂತನ ಹಸಿರು ಅಭಿಯಾನ ಸಾರ್ವಜನಿಕರಿಂದ ಮೆಚ್ಚುಗೆಗೆ ಪಾತ್ರವಾಯಿತು.
ಈ ಕಾರ್ಯಕ್ರಮದಲ್ಲಿ ಶಿಕ್ಷಕರಾದ ಮನೋಜ್, ಶಿಕ್ಷಕಿಯರಾದ ಗಾಯತ್ರಿ, ಪುಷ್ಪಲತಾ, ಶ್ವೇತಾ ಸಹಕರಿಸಿದರು.
