ಮೂಡುಬಿದಿರೆ

ಮಹಾವೀರ ಕಾಲೇಜಿನಲ್ಲಿ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಬಗ್ಗೆ ಮಾಹಿತಿ

ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮದ ಅಂಗವಾಗಿ ನಮ್ಮ ಸಹ ಸಂಸ್ಥೆಯಾದ ಎ.ಜಿ. ಸೋನ್ಸ್ ಐ.ಟಿ.ಐ. ಯ ಹಿರಿಯ ಉಪನ್ಯಾಸಕರಾದ ಶಿವಪ್ರಸಾದ ಹೆಗ್ಡೆಯವರು “ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ” ಬಗ್ಗೆ ಮಾಹಿತಿ ನೀಡಿದರು.


ರಸ್ತೆ ಅಪಘಾತಗಳು ದಿನೇ ದಿನೇ ಹೆಚ್ಚುತ್ತಿರುವ ಈ ಕಾಲದಲ್ಲಿ ಪ್ರತಿಯೊಬ್ಬರು ಸಂಚಾರ ನಿಯಮಗಳನ್ನು ಪಾಲಿಸಬೇಕು. ಅಪಘಾತಗಳಾಗದಂತೆ ಯಾವ ರೀತಿ ಮುಂಜಾಗೃತೆ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂಬುದರ ಬಗ್ಗೆ ಕೆಲವಷ್ಟು ನೈಜ ಘಟನೆಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ವಹಿಸಿದ್ದರು.

ಕಾರ್ಯಕ್ರಮ ಸಂಯೋಜಕಿ ದೀಕ್ಷಾ ಉಪಸ್ಥಿತರಿದ್ದರು. ಉಪನ್ಯಾಸಕಿ ಪದ್ಮಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕೋಟಿ ಚೆನ್ನಯ ಕ್ರೀಡಾ ಸಂಭ್ರಮದ ಸಂಚಾಲಕರ ಆಯ್ಕೆ

Madhyama Bimba

ದೀಪಾವಳಿ ಹಬ್ಬಕ್ಕೆ ಕಾರ್ಕಳದ ನ್ಯೂ ಪವನ್ ಜ್ಯುವೆಲ್ಲರ್ಸ್ ಆಕರ್ಷಕ ಬಂಪರ್ ಆಫರ್

Madhyama Bimba

ಇಲೆಕ್ಟ್ರಿಕಲ್ ಪದವೀಧರೆ ಅನುಷಾ ಆಚಾರ್ ದೇಸೀ ಆಹಾರ ಕಾಳಜಿಗೆ ರಾಷ್ಟ್ರೀಯ ನೀತಿ ಆಯೋಗ ಗೌರವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More