ಕಾರ್ಕಳಹೆಬ್ರಿ

ಕಾರ್ಕಳ: ಹೃದಯಾಘಾತದಿಂದ ಮೃತ್ಯು

ಕಾರ್ಕಳ: ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತುವಿಗೀಡಾದ ಘಟನೆ ಜು. 03ರಂದು ನಡೆದಿದೆ.
ಯಾದಗಿರಿ ನಿವಾಸಿ ಸಾಹೇಬಣ್ಣ (37) ಮೃತಪಟ್ಟವರು.

ಇವರು ಸುಮಾರು 03 ವರ್ಷಗಳಿಂದ ಕಾರ್ಕಳದ ಮುಡಾರು ಪ್ರಶಾಂತ ಕುಮಾರ್ ಎಂಬವರ ಜೆ.ಸಿ.ಬಿ ಆಪರೇಟರ್ ಆಗಿ ಕೆಲಸ ಮಾಡಿಕೊಂಡಿದ್ದು, ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥನದ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಸುಮಾರು 06ತಿಂಗಳ ಹಿಂದೆ ಎದೆ ನೋವು ಕಾಣಿಸಿಕೊಂಡಿದ್ದು ಕಾರ್ಕಳ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಎಂದಿನಂತೆ ಕೆಲಸಕ್ಕೆ ಹೊರಟವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಚಿಕಿತ್ಸೆಗಾಗಿ ಕಾರ್ಕಳದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದು ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ವಿಶ್ವ ಸುರಕ್ಷತಾ ದಿನಾಚರಣೆ

Madhyama Bimba

114 ವರ್ಷಗಳ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕಿನಿಂದ 1,535 ಕೋಟಿ ರೂಪಾಯಿ ವ್ಯವಹಾರ ; 22 ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

Madhyama Bimba

ಜೋಡುರಸ್ತೆ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಮಹಾಸಭೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More