ಕಾರ್ಕಳ: ಕಾರ್ಕಳ ಅನಂತಶಯನ ಬಳಿ ಮೋಟಾರ್ ಸೈಕಲ್ಗೆ ಕಾರು ಡಿಕ್ಕಿಯಾದ ಘಟನೆ ಜು. ೦೧ರಂದು ವರದಿಯಾಗಿದೆ.
ಕಾರ್ಕಳ ಕಸಬಾ ಗ್ರಾಮದ ನರಸಿಂಹ ಮೂರ್ತಿ ವೈ (57) ಇವರು ತನ್ನ ಮೋಟಾರ್ ಸೈಕಲ್ನಲ್ಲಿ ತಾಲೂಕು ಆಸ್ಪತ್ರೆಗೆ ಕಡೆಗೆ ಬರುತ್ತಿರುವಾಗ ಶ್ರೀ ವೇಣುಗೋಪಾಲ ದೇವಸ್ಥಾನದ ಬಳಿ ಕಾರು ಚಾಲಕ ಅತೀ ವೇಗದಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ.
ಡಿಕ್ಕಿಯ ಪರಿಣಾಮ ನರಸಿಂಹ ಮೂರ್ತಿಯವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಕಾರ್ಕಳ ತಾಲೂಕು ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
