ನೀರೆ ಬೊಟ್ಟ ನಿವಾಸಿ ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷರು, ನಿರ್ದೇಶಕರೂ, ನೀರೆ ಗ್ರಾಮ ಪಂಚಾಯತ್ನ ಮಾಜಿ ಸದಸ್ಯ ರಾಮಕೃಷ್ಣ ಶೆಟ್ಟಿ (70ವ) ಜು. 9ರಂದು ಬೆಳಿಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.
ಮೃತರು ಪತ್ನಿ ಹಾಗೂ ಓರ್ವ ಪುತ್ರಿ ಅಗಲಿದ್ದಾರೆ.
ಮೃತರ ಅಂತಿಮ ದರ್ಶನವನ್ನು ಇಂದು ಮಧ್ಯಾಹ್ನ 1 ಗಂಟೆಯಿಂದ ಅವರ ಸ್ವಗೃಹವಾದ ಬೈಲೂರಿನ “ಶ್ರೀ ಸಿದ್ಧಿ” ಮನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ಮುಂದಿನ ಅಂತಿಮ ಸಂಸ್ಕಾರ ನೀರೆ ಬೊಟ್ಟ ಮೃತರ ಹಿರಿಯರ ಮನೆಯಲ್ಲಿ ಸಂಜೆ 5 ಗಂಟೆಗೆ ನಡೆಸಲಾಗುವುದೆಂದು ಮೃತರ ಕುಟುಂಬಸ್ಥರು ತಿಳಿಸಿರುತ್ತಾರೆ.
