ನೆಕ್ಲಾಜಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಅಂಗ ಸಂಸ್ಥೆಯಾದ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯ ಪದಗ್ರಹಣ ಸಮಾರಂಭ ಹಾಗೂ ಮಹಾಸಭೆಯು ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ನಡೆಯಿತು.
ಮಹಾಸಭೆಯ ಅಧ್ಯಕ್ಷತೆಯನ್ನು ನಿಕಟ ಪೂರ್ವ ಅಧ್ಯಕ್ಷರಾದ ನಳಿನಿ ವಿಜಯೇಂದ್ರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗಾಯತ್ರಿ ಮಹಿಳಾ ಮಂಡಳಿಯ ಅಧ್ಯಕ್ಷರು ನೆಕ್ಲಾಜೆ ದೇವಸ್ಥಾನದ ಮಾಜಿ ಆಡಳಿತ ಮೊಕ್ತೆಸರರು ಶಿಲ್ಪಿ ರಾಮಚಂದ್ರ ಆಚಾರ್ಯ ಜೊತೆ ಮೊಕ್ತೆಸರರಾದ ನಿಟ್ಟೆ ಸುರೇಶ್ ಆಚಾರ್ಯ ಪಿ ರವಿ ಆಚಾರ್ಯ ಹಾಗೂ ಪಿ ವಸಂತ ಆಚಾರ್ಯ ಮತ್ತು ಕೋಶಾಧ್ಯಕ್ಷೆ ಜ್ಯೋತಿ ರಮೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಾರ್ಥನೆಯನ್ನು ಶೋಭಾ ಮತ್ತು ವಿಜಯ ಭಾಸ್ಕರ್ ನೆರವೇರಿಸಿ ಉಪಾಧ್ಯಕ್ಷರಾದ ಕವಿತಾ ಹರೀಶ್ ಸ್ವಾಗತಿಸಿದರು. ಕಾರ್ಯದರ್ಶಿ ಗೀತ ಚಂದ್ರ ವರದಿ ವಾಚಿಸಿ ಕಾರ್ಯಕ್ರಮ ನಿರೂಪಿಸಿದರು.
