ಕಾರ್ಕಳ

ಕಾರ್ಕಳ ತಾಲೂಕು ಗುಡಿಗಾರ ಸಮಾಜ ಸಂಘ ಕೆರ್ವಾಶೆ ವತಿಯಿಂದ ಗಿಡ ನೆಡುವ ಹಾಗೂ ಸ್ವಚ್ಛತಾ  ಕಾರ್ಯಕ್ರಮ

ಕಾರ್ಕಳ ತಾಲೂಕು ಗುಡಿಗಾರ ಸಮಾಜ ಸುಧಾರಕ ಸಂಘ, ಕೆರ್ವಾಶೆ ಇವರ ವತಿಯಿಂದ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಹಾಗೂ ಸ್ವಚ್ಛತಾ ಕಾರ್ಯಕ್ರಮವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೆರ್ವಾಶೆ ಇಲ್ಲಿ ಜು. 12ರಂದು ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ 15 ಕಾಳು ಮೆಣಸಿನ ಗಿಡಗಳನ್ನು ನೆಡಲಾಯಿತು. ಜೊತೆಗೆ ಶಾಲಾ ಆವರಣದಲ್ಲಿದ್ದ ಅರಣ್ಯ ಇಲಾಖೆಯವರಿಂದ ತೆರವುಗೊಳಿಸಲ್ಪಟ್ಟ ಮಾವಿನ ಮರದ ರೆಂಬೆಗಳನ್ನು ಸ್ಥಳಾಂತರಿಸುವ ಕಾರ್ಯವನ್ನೂ ಸಂಘದ ವತಿಯಿಂದ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಗಣೇಶ್ ಗುಡಿಗಾರ್, ಉಪಾಧ್ಯಕ್ಷೆ ಶ್ರೀಮತಿ ವಸಂತಿ ಗುಡಿಗಾರ್, ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಗುಡಿಗಾರ್, ಗೌರವ ಸಲಹೆಗಾರರಾದ ವಾಸುದೇವ ಗುಡಿಗಾರ್ ಹಾಗೂ ಕೋಶಾಧಿಕಾರಿ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ನಾರಾಯಣ ಗುಡಿಗಾರ್, ಎಸ್‌ಡಿಎಮ್‌ಸಿ ಉಪಾಧ್ಯಕ್ಷರಾದ ಶ್ರೀಮತಿ ರೂಪ ಶೆಟ್ಟಿ ಉಪಸ್ಥಿತರಿದ್ದರು.

ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪ್ರಮೀಳಾ ಸ್ವಾಗತಿಸಿ, ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿ, ಸಂಘದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು.

Related posts

ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ಕುರಿತು ಕಾರ್ಯಕರ್ತರ ಧ್ವನಿ ಗಟ್ಟಿಯಾಗಬೇಕು: ವಿ. ಸುನಿಲ್ ಕುಮಾರ್

Madhyama Bimba

ಏ.5: ಕಾರ್ಕಳ ರಾಮಪ್ಪ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಸಂಭ್ರಮ ಮತ್ತು ನೂತನ ಕಟ್ಟಡ ಲೋಕಾರ್ಪಣೆ

Madhyama Bimba

ನೆಕ್ಲಾಜೆ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More