ಸಾರ್ವಜನಿಕ ಶ್ರೀ ಗಣೆಶೋತ್ಸವ ಸಮಿತಿ ಗಾಂಧಿ ಸ್ಮಾರಕ ಭವನ ನೀರೆ ಬೈಲೂರು ಇಲ್ಲಿಯ 47ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದಿಲೀಪ್ ಶೆಟ್ಟಿ ಕೆಳಪೇಟೆ ಇವರು ಪುನರಾಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ಧೀರಜ್ ಹೆಗ್ಡೆ, ಕೋಶಾಧಿಕಾರಿಯಾಗಿ ಹರೀಶ್ ಆಚಾರ್ಯ, ಕ್ರೀಡಾ ಕಾರ್ಯದರ್ಶಿಯಾಗಿ ಕಿಶನ್ ಕೌಡೂರು, ಸುನಿಲ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ತಿಲಕ್, ವಿಶ್ವಾಸ್ ಕೌಡೂರು ಇವರನ್ನು ಪುನರಾಯ್ಕೆ ಮಾಡಲಾಯಿತು.
ಸಮಿತಿಯ ಸಭೆಯನ್ನು ಜು. ೧೮ರಂದು ಬೈಲೂರು ಶ್ರೀ ಮಾರಿಯಮ್ಮ ಸಬಾಭವನದಲ್ಲಿ ನಡೆದಿದ್ದು, ಈ ಸಭೆಯಲ್ಲಿ ಪದಾಧಿಕಾರಿಗಳನ್ನು ಪುನರಾಯ್ಕೆ ಮಾಡಲಾಯಿತು.
