ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದಲ್ಲಿ ಹುಲಿ, ಚಿರತೆಗಳ ಉಪಟಳ ಹೆಚ್ಚಾಗಿದ್ದು, ಕೆಲವು ದಿನಗಳಿಂದ ಬೆಳಾರೆ ಪರಿಸರದ ರಫೀಕ್ ಎಂಬವರ ದನದ ಹಟ್ಟಿಗೆ ಹುಲಿ ದಾಳಿ ನಡೆಸಿ ಸುಮಾರು 5 ದನಗಳನ್ನು ಕೊಂದು ಹಾಕಿದೆ. ಅಲ್ಲದೆ ಸುತ್ತಮುತ್ತಲಿನ ಮನೆಗಳಲ್ಲಿನ ಸಾಕು ಪ್ರಾಣಿಗಳನ್ನು ಕೊಂದು ತಿನ್ನುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಅಲ್ಲದೆ ಅರಣ್ಯ ಇಲಾಖಾ ಅಧಿಕಾರಿಗಳು ಸ್ಥಳ ಭೇಟಿ ನೀಡದೇ ಇರುವುದರಿಂದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಲಿ, ಚಿರತೆ ಇತರ ಕಾಡು ಪ್ರಾಣಿಗಳಿಂದ ಗ್ರಾಮಸ್ಥರಿಗೆ ಯಾವುದೇ ಸಮಸ್ಯೆ ಎದುರಾಗದಂತೆ ಅರಣ್ಯ ಇಲಾಖಾ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.


