ಕಡ್ತಲ ಅಂಗನವಾಡಿ ಕೇಂದ್ರದಲ್ಲಿ ದಾನಿ ಸನ್ ಕ್ರಿಯೇಶನ್ ಬೆಂಗಳೂರು ಮಾಲಕರಾದ ಗೌರವಾನ್ವಿತ ಪಾಂಡುರಂಗ ನಾಯಕ್ ಅವರು ನೀಡಿದ ಉಚಿತ ಬ್ಯಾಗ್ ವಿತರಣಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಐ.ಎ.ಎಸ್ ಅಧಿಕಾರಿ ಸದಾಶಿವ ಪ್ರಭು ಬ್ಯಾಗ್ ವಿತರಣೆ ಮಾಡಿ ಅಂಗನವಾಡಿ ಕೇಂದ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಇರುವುದನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.
ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸುಷ್ಮಾ, ನಿಕಟಪೂರ್ವ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಸುಕೇಶ್ ಹೆಗ್ಡೆ, ಅರುಣ್ ಕುಮಾರ್ ಹೆಗ್ಡೆ, ದಾನಿಗಳ ಸಹೋದರ ಪುರಂದರ ನಾಯಕ್, ಸಂಜೀವ ಪೂಜಾರಿ, ಮೋಹನ್ ದಾಸ್ ನಾಯಕ್, ಚಂದ್ರಕಾಂತ ಹೆಗ್ಡೆ, ಉಪಸ್ಥಿತರಿದ್ದರು.
ಅಂಗನವಾಡಿ ಕಾರ್ಯಕರ್ತೆ ಶ್ವೇತಾ ಸತೀಶ್ ಹೆಗ್ಡೆ ಸ್ವಾಗತಿಸಿ ನಿರೂಪಿಸಿದರು. ಬಾಲವಿಕಾಸ ಸಮಿತಿಯವರು, ಮಕ್ಕಳ ಪೋಷಕರು, ಸ್ತ್ರೀಶಕ್ತಿ ಸಂಘದ ಸದಸ್ಯರು, ಇನ್ನಿತರರು ಉಪಸ್ಥಿತರಿದ್ದರು.
