ಕಾರ್ಕಳಹೆಬ್ರಿ

ಹೆಬ್ರಿ: ಸಂಜೀವಿನಿ ಯೋಜನೆಯ ಹಣ ದುರುಪಯೋಗ- ಪ್ರಕರಣ ದಾಖಲು

ಹೆಬ್ರಿ: ಸಂಜೀವಿನಿ ಯೋಜನೆಯ ಹಣವನ್ನು ತನ್ನ ಸ್ವಂತಕ್ಕೆ ಬಳಸಿ ದುರುಪಯೋಗದ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀಮತಿ ನಂದಿನಿ ಎಂಬುವವರು ಧನ ಲಕ್ಷ್ಮೀ ಸಂಜಿವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇದರ ಮುಖ್ಯ ಪುಸ್ತಕ ಬರಹಗಾರರಾಗಿದ್ದು, ಸಂಸ್ಥೆಯಲ್ಲಿ ೮ ವರ್ಷದಿಂದ ಕೆಲಸ ಮಾಡಿಕೊಂಡಿದ್ದರು. ಇವರು 2020 ರಿಂದ 2026 ರವರೆಗೆ ಧನ ಲಕ್ಷ್ಮೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸದಸ್ಯತ್ವ ಹೊಂದಿರುವ ವಿವಿಧ ಸ್ವ ಸಹಾಯ ಸಂಘದ ಸದಸ್ಯರುಗಳು ಪಡೆದುಕೊಂಡ ಸಾಲವನ್ನು ಒಕ್ಕೂಟಕ್ಕೆ ಮರು ಪಾವತಿ ಮಾಡಿದ್ದರೂ ಕೂಡ ಸಾಲದ ಹಣವನ್ನು ಒಕ್ಕೂಟದ ಖಾತೆಗೆ ಜಮಾ ಮಾಡದೆ ಎರಡೆರಡು ಖಾತೆ ಪುಸ್ತಕಗಳನ್ನು ಹಾಗೂ ರಶೀದಿ ಪುಸ್ತಕಗಳನ್ನು ನಿರ್ವಹಣೆ ಮಾಡಿ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಧ್ಯಕ್ಷರು ಹಾಗೂ ಕಾರ್ಯದರ್ಶಿರವರ ನಕಲಿ ಸಹಿಗಳನ್ನು ಮಾಡಿ ಒಟ್ಟು 28,19,489/-ಮೊತ್ತವನ್ನು ತನ್ನ ಸ್ವಂತಕ್ಕೆ ಬಳಸಿಕೊಂಡು ನಂಬಿಕೆ ದ್ರೋಹವೆಸಗಿ ಮೋಸ ಮಾಡಿರುತ್ತಾರೆ.

Related posts

ಬಲ್ಲಾಡಿಯಲ್ಲಿ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ, ಪ್ರತಿಭಾ ಪುರಸ್ಕಾರ, ಉಚಿತ ನೋಟ್ ಬುಕ್ ವಿತರಣೆ

Madhyama Bimba

ಕ್ರೈಸ್ಟ್‌ಕಿಂಗ್ : ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ನೂತನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ

Madhyama Bimba

ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಜೇಸಿ ಕಾರ್ಕಳ ಇದರ ಜಂಟಿ ಆಶ್ರಯದಲ್ಲಿ ಕೆಸರ್ಡ್ ಒಂಜಿ ದಿನ ಆಚರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More