ಹೆಬ್ರಿ ಗ್ರಾಮ ಪಂಚಾಯತ್ ಆಶ್ರಯದಲ್ಲಿ 80ನೇ ಸ್ವಾಂತಂತ್ರ್ಯ ದಿನಾಚರಣೆ ಧ್ವಜಾರೋಹಣವನ್ನು ಹೆಬ್ರಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ದಿನೇಶ್ ಡಿ ಇ ರವರು ನೆರವೇರಿಸಿದರು.
ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯ ಆಶಯಗಳಿಗೆ ನಾವು ಬದ್ಧರಾಗಿ ಹಕ್ಕು ಮತ್ತು ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಮೂಲಕ ವಿಕಸಿತ ಭಾರತಕ್ಕಾಗಿ ಕಾರ್ಯನಿರ್ವಹಿಸುವ ಎಂದು ಸ್ವಾತಂತ್ರ್ಯ ಸಂದೇಶ ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮೃತ ಕುಲಾಲ್ ಶುಭಾಶಯಗಳನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಂಚಾಯತ್ ಪೂರ್ವಧ್ಯಕ್ಷ ಎಚ್.ಕೆ ಸುಧಾಕರ್, ನಿಕಟ ಪೂರ್ವ ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ನಾಯಕ್, ಸಹಾಯಕ ಲೆಕ್ಕಾಧಿಕಾರಿ ಪ್ರತಿಭಾ ಪೆರ್ಣಂಕಿಲ, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಎಸ್ ಎಲ್ ಆರ್ ಎಂ ಸಿಬ್ಬಂದಿಗಳು, ಸಂಜೀವಿನಿ ಎಲ್ ಸಿ ಆರ್ ಪಿ, ಕೃಷಿ ಸಖಿ ಮುಂತಾದವರು ಭಾಗವಹಿಸಿದ್ದರು.
