ಕಾರ್ಕಳ: ಜೋಡುರಸ್ತೆಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದ್ದು, ಬೆಳ್ಳಿ ಹಬ್ಬದ ಸಂಭ್ರಮಾಚರಣೆಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಆ. 23 ರಂದು ಬೆಳಿಗ್ಗೆ ಗಂಟೆ 11.೦೦ ಕ್ಕೆ. ಸರಿಯಾಗಿ ಸಂಘದ ಅಧ್ಯಕ್ಷರಾದ ಸಂತೋಷ್ ರಾವ್ ಇವರ ಉಪಸ್ಥಿತಿಯಲ್ಲಿ ಸಂಘದ ಕೇಂದ್ರ ಕಛೇರಿ ಲಕ್ಷ್ಮಿ ಪ್ರಸಾದ ಕಟ್ಟಡ ಜೋಡುರಸ್ತೆ ಕುಕ್ಕುಂದೂರು ಇದರ ಸಭಾಭವನದಲ್ಲಿ ನಡೆಯಲಿದೆ ಎಂದು ಕೇಂದ್ರ ಕಛೇರಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಜಯಶ್ರೀಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
