ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜೋಡುರಸ್ತೆ ಇದರ 43ನೇ ವರ್ಷದ ಗಣೇಶೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಗಣಪತಿ ವಿಗ್ರಹ ರಚನಕಾರರಾಗಿರುವ ಗಣೇಶ್ ನಾಯಕ್ ಎಣ್ಣೆಹೊಳೆ ಇವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಸಂತೋಷ್ ರಾವ್, ಗೌರವಾಧ್ಯಕ್ಷರಾದ ರಮೇಶ್ ನಾಯಕ್, ಗೌರವ ಉಪಾಧ್ಯಕ್ಷ ಸಚಿನ್ ಸಾಲಿಯಾನ್, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಐಸಿರ, ಕೋಶಾಧಿಕಾರಿ ಕಿಶೋರ್ ಕುಮಾರ್ ಹಾಗೂ ಎಲ್ಲಾ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.
