ಶಿರ್ತಾಡಿ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ) ಮತ್ತು ನಾರಾಯಣ ಗುರು ಮಹಿಳಾ ಘಟಕ ಇದರ ಆಶ್ರಯದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯು ಕಂದೀರು ಸೋಮನಾಥ ಶಾಂತಿಯವರ ಪೌರೋಹಿತ್ಯದಲ್ಲಿ ಆಗಸ್ಟ್ 21ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರಗಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಮಹಿಳಾ ಘಟಕ ಉಪಸಮಿತಿ ಗ್ರಾಮ ಸಮಿತಿಗಳ ಅಧ್ಯಕ್ಷರು ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.
