ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಕೊಡಮಾಡುವ ಜಿಲ್ಲಾ ಪ್ರಶಸ್ತಿಗೆ ಶಿರ್ತಾಡಿ ಕೃಷಿ ಪತ್ತಿನ ಸಹಕಾರಿ ಸಂಘ ಆಯ್ಕೆಯಾಗಿದೆ. ಇಂದು ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಭವನದಲ್ಲಿ ನಡೆದ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶಿರ್ತಾಡಿ ಸಂಘದ ಅಧ್ಯಕ್ಷ ಎಸ್. ಪ್ರವೀಣ್ ಕುಮಾರ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸುಮನಾಜಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ ಎಂ. ಎನ್ ರಾಜೇಂದ್ರಕುಮಾರ್ ಹಾಗೂ ನಿರ್ದೇಶಕರುಗಳು ಪ್ರಶಸ್ತಿ ಪ್ರದಾನ ಮಾಡಿದರು. ಶಿರ್ತಾಡಿ ಸಂಘದ ಉಪಾಧ್ಯಕ್ಷ ಚಿಂತನ್ ಲೋಬೊ ಹಾಗೂ ನಿರ್ದೇಶಕರುಗಳು ಈ ಸಂದರ್ಭದಲ್ಲಿದ್ದರು.
ಸಂಘ ಪ್ರಾರಂಭಗೊಂಡು ಪ್ರಥಮ ವರ್ಷದಲ್ಲಿಯೇ ತನ್ನ ವ್ಯಾವಹಾರಿಕ ಸಾಧನೆಗಾಗಿ ಜಿಲ್ಲಾ ಪ್ರಶಸ್ತಿ ಪಡೆದುಕೊಂಡ ಹೆಗ್ಗಳಿಕೆಗೆ ಪಾತ್ರವಾಗಿದೆ
