Blog

ಶಿರ್ತಾಡಿ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಪ್ರಶಸ್ತಿ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಕೊಡಮಾಡುವ ಜಿಲ್ಲಾ ಪ್ರಶಸ್ತಿಗೆ ಶಿರ್ತಾಡಿ ಕೃಷಿ ಪತ್ತಿನ ಸಹಕಾರಿ ಸಂಘ ಆಯ್ಕೆಯಾಗಿದೆ. ಇಂದು ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಭವನದಲ್ಲಿ ನಡೆದ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶಿರ್ತಾಡಿ ಸಂಘದ ಅಧ್ಯಕ್ಷ ಎಸ್. ಪ್ರವೀಣ್ ಕುಮಾರ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸುಮನಾಜಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ ಎಂ. ಎನ್ ರಾಜೇಂದ್ರಕುಮಾರ್ ಹಾಗೂ ನಿರ್ದೇಶಕರುಗಳು ಪ್ರಶಸ್ತಿ ಪ್ರದಾನ ಮಾಡಿದರು. ಶಿರ್ತಾಡಿ ಸಂಘದ ಉಪಾಧ್ಯಕ್ಷ ಚಿಂತನ್ ಲೋಬೊ ಹಾಗೂ ನಿರ್ದೇಶಕರುಗಳು ಈ ಸಂದರ್ಭದಲ್ಲಿದ್ದರು.

ಸಂಘ ಪ್ರಾರಂಭಗೊಂಡು ಪ್ರಥಮ ವರ್ಷದಲ್ಲಿಯೇ ತನ್ನ ವ್ಯಾವಹಾರಿಕ ಸಾಧನೆಗಾಗಿ ಜಿಲ್ಲಾ ಪ್ರಶಸ್ತಿ ಪಡೆದುಕೊಂಡ ಹೆಗ್ಗಳಿಕೆಗೆ ಪಾತ್ರವಾಗಿದೆ

Related posts

ಕಟ್ಟಡದ ಕೆಲಸ ಮಾಡುತ್ತಿದ್ದ ಬಾಲಕ ಕೆಳಗೆ ಬಿದ್ದು ಸಾವು

Madhyama Bimba

ಸಿಇಟಿ ಫಲಿತಾಂಶದಲ್ಲಿ ಎಕ್ಸಲೆಂಟ್ ಕಾಲೇಜಿನ ಅದ್ಭುತ ಸಾಧನೆ

Madhyama Bimba

ಶಾಸಕ ಯಶ್ಪಾಲ್ ವಿರುದ್ಧ ಕಾರ್ಕಳ ಕಾಂಗ್ರೆಸ್ ದೂರು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More