ಕಾರ್ಕಳ

ಕಾರ್ಕಳ: ರಸ್ತೆ ಬದಿ ನಿಲ್ಲಿಸಿದ್ದ ರಿಕ್ಷಾಕ್ಕೆ ಈಕೋವಾಹನ ಡಿಕ್ಕಿ

ಕಾರ್ಕಳ: ಈದು ಹೊಸ್ಮಾರು ಕಾರ್ಕಳ- ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ರಿಕ್ಷಾಕ್ಕೆ ಈಕೋವಾಹನ ಡಿಕ್ಕಿಯಾದ ಘಟನೆ ಆ. 23ರಂದು ವರದಿಯಾಗಿದೆ.

ಈದುವಿನ ಸದಾನಂದ (೫೪)ರವರು ತನ್ನ ರಿಕ್ಷಾವನ್ನು ರಸ್ತೆ ಬದಿ ನಿಲ್ಲಿಸಿದ್ದು, ಈ ಸಂದರ್ಭ ಕಾರ್ಕಳದಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಈಕೋವಾಹನದ ಚಾಲಕ ಜಗದೀಶ್ ಮದ್ಯಪಾನ ಸೇವಿಸಿ ವಾಹನ ಚಲಾಯಿಸಿದ ಪರಿಣಾಮ ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ಪರಿಣಾಮ ರಿಕ್ಷಾದ ಹಿಂಬಾಗ ಮತ್ತು ಇಕೋ ವಾಹನದ ಮುಂಬಾಗ ಜಖಂಗೊಂಡಿರುತ್ತದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕ್ರೈಸ್ಟ್‌ಕಿಂಗ್: ಕೆಸಿಇಟಿಯಲ್ಲಿ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ – ಅಗ್ರ 500ರ ಒಳಗೆ ಒಂದು ಹಾಗೂ ಸಾವಿರದ ಒಳಗೆ ಇಬ್ಬರು ವಿದ್ಯಾರ್ಥಿಗಳಿಗೆ ರ್‍ಯಾಂಕ್

Madhyama Bimba

ನೆಕ್ಲಾಜೆ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Madhyama Bimba

ಪಳ್ಳಿ: 80ನೇ ಸ್ವಾತಂತ್ರ್ಯ ದಿನಾಚರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More