ಕಾರ್ಕಳ: ಹಾವು ಕಚ್ಚಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಆ. 26ರಂದು ವರದಿಯಾಗಿದೆ.
ಹಿರ್ಗಾನ ಗ್ರಾಮದ ತುಂಬೆಹಿತ್ಲು ನಿವಾಸಿ ಗುಲಾಬಿ (79) ಮೃತಪಟ್ಟವರು.
ಮನೆಯ ಬಳಿ ಯಾವುದೋ ಹಾವು ಇವರ ಬಲಕೈಗೆ ಕಚ್ಚಿದ್ದು, ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆತಂದು ನಂತರ ಹೆಚ್ಚಿನ ಚಿಕಿತ್ಸೆಗೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆ ತಂದು ವೈದ್ಯರು ಪರೀಕ್ಷಿಸಿ ದಾರಿ ಮದ್ಯೆ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ.
