ಕಾರ್ಕಳಹೆಬ್ರಿ

ಭ್ರಷ್ಟರಿಂದಲೇ ಭ್ರಷ್ಟಾಚಾರದ ಆರೋಪ ಪ್ರಜಾಪ್ರಭುತ್ವ ವ್ಯವಸ್ಥೆಯ ಆದ:ಪಥನ – ನವೀನ್ ನಾಯಕ್

ಕಾರ್ಕಳ ಶಾಸಕರು ಮಾಜಿ ಸಚಿವರು ನಮ್ಮ ಜನಪ್ರಿಯ ಶಾಸಕರಾದ ವಿ ಸುನಿಲ್ ಕುಮಾರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವ ಕಾರ್ಕಳ ಕಾಂಗ್ರೆಸ್ಸಿಗರೆ ನಿಮಗೆ ಸ್ವಲ್ಪ ಅದರೂ ರಾಜಕೀಯ ನೈತಿಕತೆ ಇದೆಯೇ? ನಿಮ್ಮ ಪಕ್ಷದ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ನಿಮಗೆ ನೈತಿಕತೆ ಇದ್ದರೆ ಜೊತೆಗೆ ತಾಕತ್ತಿದ್ದರೆ ನಿಮ್ಮ ಸರ್ಕಾರದ ವಿರುದ್ಧ ನಿಮ್ಮ ನಾಯಕರುಗಳ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಸ್ಟಿಕ್ಕರ್ ಅಭಿಯಾನ ಆರಂಭಿಸಿ.

ನಿಮ್ಮದೇ ಕಾಂಗ್ರೆಸ್ ಪಕ್ಷದ ಪುತ್ತೂರಿನ ಶಾಸಕರಾದ ಅಶೋಕ್ ರೈ ರವರು ೭% ಕಮಿಷನ್ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರವಾಗಿ ಪತ್ರ ಬರೆದಿರುವುದು ನಿಮ್ಮ ಗಮನಕ್ಕಿಲ್ಲವೇ? ೨೦೨೩ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಬಂದಾಗಿನಿಂದ ರಾಜ್ಯದಲ್ಲಿ ಕಲೆಕ್ಷನ್ ವ್ಯವಸ್ಥೆಯ ಒಂದು ಹೊಸ ಸಂಪ್ರದಾಯ ಪ್ರಾರಂಭವಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಧಿಕಾರಿಗಳ ಮೂಲಕ ಕಮಿಷನ್ ಹಣ ಸಂಗ್ರಹ ಮಾಡಿ ರಾಜ್ಯದ ಕಾಂಗ್ರೆಸ್ ಸರ್ಕಾರದ ಮಂತ್ರಿಗಳಿಗೆ ತಲುಪಿಸುವ ವ್ಯವಸ್ಥಿತ ಕಾರ್ಯ ಯಾವುದೇ ಮುಚ್ಚುಮರೆ ಇಲ್ಲದೆ ನಡೆಯುತ್ತಿದೆ. ಇದನ್ನು ನಾವು ಹೇಳುತ್ತಿಲ್ಲ ನಿಮ್ಮ ಸರಕಾರದ ಅಧಿಕಾರಿಗಳೇ ಬಹಿರಂಗವಾಗಿ ಹೇಳುತ್ತಿದ್ದಾರೆ.

ಉದಯಕುಮಾರ್ ಶೆಟ್ಟಿ ಅವರು ಉಡುಪಿ ಜಿಲ್ಲೆಯ ಕಲೆಕ್ಷನ್ ಏಜೆಂಟ್ ನಂತೆ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲೆಯ ಕಾಂಗ್ರೆಸ್ ಇತರ ನಾಯಕರುಗಳೇ ಹೇಳುತ್ತಿದ್ದಾರೆ. ಇಂತಹ ಭ್ರಷ್ಟ ವ್ಯವಸ್ತೆಯಲ್ಲಿದ್ದುಕೊಂಡು ಅದನ್ನು ಮರೆಮಾಚಲು ನೀವು ಮಾಡುತ್ತಿರುವ ನಾಟಕ ಕಾರ್ಕಳ ಜನತೆಗೆ ಈಗಾಗಲೇ ಗೊತ್ತಾಗಿದೆ.

ಸುನಿಲ್ ಕುಮಾರ್ ಅವರು ಪ್ರತಿ ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗೃಹಲಕ್ಷ್ಮಿ ಹಗರಣ, ವಾಲ್ಮೀಕಿ ಹಗರಣ, ಶಕ್ತಿ ಯೋಜನೆ ಹಗರಣ, ಮೂಢ ಹಗರಣ ಸೇರಿದಂತೆ ಒಂದೊಂದೇ ಹಗರಣಗಳ ಬಗ್ಗೆ ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದರು. ಈ ನಿಟ್ಟಿನಲ್ಲಿ ನಾಗೇಂದ್ರ ತನ್ನ ಸಚಿವ ಸ್ಥಾನಕ್ಕೆ ಎರಡನೇ ಬಾರಿ ರಾಜೀನಾಮೆ ನೀಡುವಂತೆ ಮಾಡಿತ್ತು. ಇದನ್ನೆಲ್ಲಾ ಮರೆ ಮಾಡಲು ಯಾವುದೇ ರೀತಿಯ ಭ್ರಷ್ಟಾಚಾರ ಆರೋಪ ಇಲ್ಲದ ನಮ್ಮ ಶಾಸಕರ ವಿರುದ್ಧ ನೀವು ಈ ತರಹದ ಸುಳ್ಳು ಆರೋಪ ಮಾಡುವುದರಿಂದ ನಮ್ಮ ಶಾಸಕರ ಕಾರ್ಯ ವೈಖರಿಗೆ ಯಾವುದೇ ಪರಿಣಾಮ ಬೀರುವುದಿಲ್ಲ. ಕಾರ್ಕಳದ ಪ್ರಜ್ಞಾವಂತ ಜನರು ನಿಮ್ಮ ನಾಟಕವನ್ನು ಸೂಕ್ಷ್ಮವಾಗಿ ನೋಡುತ್ತಿದ್ದಾರೆ.

ಉದಯಕುಮಾರ್ ಶೆಟ್ಟಿ ಅವರೇ, ನಿಮಗೆ ಕಳಪೆ ಕಾಮಗಾರಿಯ ಪಿತಾಮಹ ಎಂದೆ ಬಿರುದು ಇದೆ. ಹಾಗಾಗಿ ನಿಮಗೆ ಭ್ರಷ್ಟಾಚಾರ ಎಂಬುದು ಬಳುವಳಿಯಾಗಿ ಬಂದಿರಬಹುದು ಹಾಗಂತ ಎಲ್ಲರೂ ನಿಮ್ಮಂತೆ ಎಂದು ಭಾವಿಸುವುದು ಸರಿಯಲ್ಲ.
ಸ್ಟಿಕರ್ ಅಭಿಯಾನದಲ್ಲಿ ಉದಯಕುಮಾರ್ ಶೆಟ್ಟಿ ಅವರನ್ನು ಹೊರಗಿಟ್ಟರೆ ಸ್ವಪಕ್ಷೀಯರು.?
ನಿನ್ನೆ ಕಾಂಗ್ರೆಸ್ಸಿನ ಸ್ಟಿಕರ್ ಅಭಿಯಾನದಲ್ಲಿ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿಯವರನ್ನು ಸ್ವಪಕ್ಷದವರೇ ಹೊರಗಿಟ್ಟರೆ? ಅಥವಾ ಸ್ವತಃ ತಾನೆ ಭಾಗವಹಿಸದೆ ಈ ಅಭಿಯಾನದಿಂದ ದೂರ ಉಳಿದರೆ? ಎಂಬುವುದು ಕಾರ್ಕಳ ಭಾರತೀಯ ಜನತಾ ಪಾರ್ಟಿಗೆ ಹಾಗೂ ಕಾರ್ಕಳದ ಸಮಸ್ತ ಜನತೆಗೆ ಸಂಶಯ ಮೂಡಿದೆ ಇದನ್ನು ಶೀಘ್ರ ಬಹಿರಂಗ ಪಡಿಸುವಂತೆ ನಾನು ಈ ಮೂಲಕ ಆಗ್ರಹಿಸುತ್ತೇನೆ ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷರಾದ ನವೀನ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸಿದ್ಧರಾಮಯ್ಯರವರಿಂದ ರಾಜ್ಯದ ಜನತೆಗೆ 6ನೇ ಗ್ಯಾರೆಂಟಿ-ಬಿಪಿಎಲ್ ಪಡಿತರ ಚೀಟಿ ರದ್ಧತಿ ಭಾಗ್ಯ: ವಿ. ಸುನಿಲ್ ಕುಮಾರ್

Madhyama Bimba

ವಸತಿ ಶಾಲೆ ಪ್ರವೇಶಾತಿ : ಅರ್ಜಿ ಆಹ್ವಾನ

Madhyama Bimba

ದಿ. ಸಂತೋಷ್ ನಾಯ್ಕ್‌ರಿಗೆ ನುಡಿನಮನ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More