ಕಾರ್ಕಳ : ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಯೋಜನೆಗಳಿಗೆ ಸರ್ಕಾರ ಆದ್ಯತೆ ನೀಡಬೇಕು. ನಿಟ್ಟೆ ಜವಳಿ ಪಾರ್ಕ್ ಯೋಜನೆಗೆ ಶಾಸಕರು ನಿರಾಸಕ್ತಿ ತೋರುತ್ತಿರುವುದು ಖಂಡನೀಯ ಎಂದು ನೇಮಿರಾಜ ರೈ ಆರೋಪಿಸಿದ್ದಾರೆ.
ಕಾರ್ಕಳ ಪತ್ರಿಕಾ ಭವನದಲ್ಲಿ ಸೆ. 16 ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಸಂತಸದ ವಿಚಾರ. ಸಭೆಯಲ್ಲಿ ಕರಾವಳಿಯ ನಿರುದ್ಯೋಗ ಸಮಸ್ಯೆ ಹಾಗೂ ಉದ್ಯೋಗ ಸೃಷ್ಟಿಯ ಕುರಿತು ಸಭೆಯಲ್ಲಿ ಚರ್ಚೆಯಾಗಬೇಕು ಎಂದು ಒತ್ತಾಯಿಸಿದರು.
ನಿಟ್ಟೆಯ ಜವಳಿ ಪಾರ್ಕ್ಗೆ ಮಂಜೂರಾತಿ ದೊರೆತು ಆರು ವರ್ಷ ಕಳೆದಿದ್ದರೂ ಯೋಜನೆ ಇನ್ನೂ ಕಾರ್ಯಗತಗೊಂಡಿಲ್ಲ. ಸರ್ಕಾರದಿಂದ 15 ಎಕರೆ ಜಾಗ ಮಂಜೂರಾಗಿದ್ದು, ರೂ.27.97 ಕೋಟಿ ಅನುದಾನವಿದೆ ಎನ್ನಲಾಗುತಿ ದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಆನಂದ ಜೋಸೆಫ್, ಪೀಟರ್ ಸಾಲ್ಡಾನ, ಶೋಭಾ ಮೂಲ್ಯ, ಒಪೀಲಿಯಾ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.
